May 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರರ 2ನೇ ವರ್ಷದ ಪುಣ್ಯಸ್ಮರಣೆ ;ಶ್ರೀ ಗುರುದೇವ ಸಹಕಾರಿ ಸಂಘ ಮತ್ತು ಶ್ರೀ ಗು.ನಾ.ಸ್ವಾ.ಸೇ ಸಂಘದಿಂದ ಸಿಯೋನ್ ಆಶ್ರಮದಲ್ಲಿ ಆಚರಣೆವಸಂತ ಬಂಗೇರರು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು: ಭಗೀರಥ ಜಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಇವರ ಆಶಯದಲ್ಲಿ ಜನಪ್ರಿಯ ಮಾಜಿ ಶಾಸಕರೂ, ಸಮಾಜಸೇವಕರೂ ಆದ ಕೆ ವಸಂತ ಬಂಗೇರ ಅವರ ದ್ವಿತೀಯ ವರ್ಷದ ಪುಣ್ಯಸ್ಮರಣೆಯನ್ನು ಸಿಯೋನ್ ಆಶ್ರಮ, ಗಂಡಿಬಾಗಿಲು ಇಲ್ಲಿನ ಆಶ್ರಮವಾಸಿಗಳಿಗೆ ಅನ್ನದಾನದ ಕಾರ್ಯಕ್ರಮದ ಮೂಲಕ ಭಾವಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಭಗೀರಥ ಜಿ ಅವರು ವಸಂತ ಬಂಗೇರರವರ ಜನಸೇವೆಯನ್ನು ಸ್ಮರಿಸಿ ಮಾತನಾಡಿ, ತಮ್ಮ ಶಾಸಕತ್ವದ ಅವಧಿಯಲ್ಲಿ ಅವರು ಜನಪರ ಕಾಳಜಿಯಿಂದ ನಡೆಸಿದ ಅಭಿವೃದ್ಧಿ ಕಾರ್ಯಗಳು ಹಾಗೂ ಬಡವರ ಮೇಲಿನ ಅವರ ಅಪಾರ ಪ್ರೀತಿ-ವಿಶ್ವಾಸವನ್ನು ನೆನಪಿಸಿಕೊಂಡರು. ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ವಸಂತ ಬಂಗೇರರು ಸದಾ ಜನಹಿತದ ಚಿಂತನೆಯಲ್ಲೇ ತೊಡಗಿಸಿಕೊಂಡಿದ್ದರು ಎಂದು ಹೇಳಿದರು.

ಸಿಯೋನ್ ಆಶ್ರಮದ ಧರ್ಮಗುರುಗಳಾದ ಯು.ಸಿ ಪೌಲೂಸ್ ಮಾತನಾಡಿ ಆಶ್ರಮ‌ ಮತ್ತು ವಸಂತ ಬಂಗೇರರ ನಡುವೆ ಇದ್ದ ನಿಕಟ ಸಂಬಂಧದ ಬಗ್ಗೆ ತಿಳಿಸಿ ಭಾವಪೂರ್ಣ ಶ್ರದ್ದಾಂಜಲಿ ಕೋರಿದರು.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಇದರ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಕೆ.ಪಿ. ದಿವಾಕರ, ಶ್ರೀಮತಿ ತನುಜಾ ಶೇಖರ್, ಚಿದಾನಂದ ಪೂಜಾರಿ ಎಲ್ದಕ್ಕ, ರಕ್ಷಿತ್ ಶಿವರಾಂ,ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಪಿ.ಕೆ. ರಾಜು ಪೂಜಾರಿ, ಕಾರ್ಯದರ್ಶಿ ನಿತೀಶ್ ಎಚ್., ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಪ್ರಸಾದ್ ಎಂ.ಕೆ. ನಿರ್ದೇಶಕರಾದ ಗುರುರಾಜ್ ಗುರಿಪಲ್ಲ, ಕಮಲಾಕ್ಷ, ಶ್ರೀಮತಿ ವಿನೋದಿನಿ ರಾಮಪ್ಪ, ಶ್ರೀಮತಿ ನಮಿತಾ, ಶ್ರೀಮತಿ ಉಷಾ ಶರತ್ ಹಾಗೂ ಸಂತೋಷ್ ಕೆ.ಸಿ, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಕುಮಾರ್, ಮುಖ್ಯ ಲೆಕ್ಕಿಗ ಕೀರ್ತನ್ ಕುಮಾರ್, ಮಾನವ ಸಂಪನ್ಮೂಲ ಅಧಿಕಾರಿ ರೂಪಲತಾ, ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.,ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ. ಮತ್ತು ಸಿಬ್ಬಂದಿವ ರ್ಗದವರು ಉಪಸ್ಥಿತರಿದ್ದರು.

ಸರಕಾರಿ ಅಪರ ವಕೀಲರಾದ ಮನೋಹರ ಕುಮಾರ್ ಅವರು ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು.

Related posts

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya
error: Content is protected !!