August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.


ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಸ್ನೇಕ್ ಅನಿಲ್ ಅವರಿಗೆ ಮೇ 6ರಂದು ಮಾಹಿತಿ ನೀಡಿದರು. ಈ ವೇಳೆ ಆಗಮಿಸಿದ ಅವರು ತಾಯಿ ನಾಗರಹಾವನ್ನು ಹಿಡಿದಿದ್ದು ಈ ವೇಳೆ ಗೋಡೆಯಲ್ಲಿ ಮರಿಗಳು ಕಂಡು ಬಂದವು. ಗೋಡೆಯಲ್ಲಿದ್ದ 26 ಮರಿಗಳನ್ನು ಹಿಡಿದು ಅವುಗಳನ್ನು ತಾಯಿ ಸಹಿತ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದ ಸುರಕ್ಷಿತ ಜಾಗದಲ್ಲಿ ಮೇ 7ರಂದು ಬಿಡಲಾಗಿದೆ.

ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸಹಕರಿಸಿದರು. ಈ ಮರಿಗಳು ಸುಮಾರು 10 ದಿನಗಳ ಹಿಂದೆ ಮೊಟ್ಟೆಯಿಂದ ಹೊರಬಂದಿರಬಹುದು ಎಂದು ಅಂದಾಜಿಸಲಾಗಿದ್ದು ಎಲ್ಲವೂ ಆರೋಗ್ಯ ಪೂರ್ಣವಾಗಿ ಇರುವುದಾಗಿ ಅನಿಲ್ ಅವರು ತಿಳಿಸಿದ್ದಾರೆ.


ಕಳೆದ ಕೆಲವು ದಿನಗಳ ಹಿಂದೆ ನೆರಿಯ ಗ್ರಾಮದ ಗುಂಡಿಕಂಡ ಎಂಬಲ್ಲಿ ಮನೆಯ ಗೋಡೆಯೊಂದರಲ್ಲಿ ಪತ್ತೆಯಾಗಿದ್ದ ನಾಗರಹಾವಿನ 16 ಮೊಟ್ಟೆಗಳನ್ನು ಅನಿಲ್ ಅವರು ರಕ್ಷಿಸಿ ಅವುಗಳಿಗೆ ಕೃತಕ ಕಾವು ನೀಡಿ ಮರಿಗಳು ಹೊರಬಂದ ಬಳಿಕ ಭಾನುವಾರ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದರು. ಈ ಮೊಟ್ಟೆಗಳನ್ನು ಇರುವೆಗಳ ದಾಳಿಯಿಂದ ರಕ್ಷಿಸಲಾಗಿತ್ತು.

Related posts

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya
error: Content is protected !!