August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಳ್ತಂಗಡಿ: ಯಕ್ಷಗಾನ ಕಲಾವಿದರು ಮತ್ತು ಅವರ ಪಾಲಕರಿಗೆ ಅವಹೇಳನ ಹಾಗೂ ಬೆದರಿಕೆ ಹಾಕಿರುವ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮಂಗಳೂರಿನ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ವಜಾಗೊಂಡಿದೆ.

ಯಕ್ಷಗಾನ ಕಲಾವಿದ ಪ್ರಜ್ವಲ್ ಕುಮಾರ್ ಜತೆ ಮೊಬೈಲ್‌ನಲ್ಲಿ ಮಾತನಾಡುವ ವೇಳೆ ಮಹೇಶ್‌ ಶೆಟ್ಟಿ ತಿಮರೋಡಿ, ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಹಾಗೂ ಅವರ ತಾಯಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ದಿನೇಶ್ ಅವರ ತಾಯಿ ಲೀಲಾವತಿ ಶೆಟ್ಟಿಗಾರ್ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಕಲಾವಿದರಾದ ಸುಂದರ ರೈ, ಪ್ರಜ್ವಲ್ ಕುಮಾರ್ ಅವರಿಗೂ ಬೈದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಸರ್ಕಾರಿ ಅಭಿಯೋಜಕ ಮೋಹನ್ ಕುಮಾ‌ರ್ ಬಿ. ವಾದ ಮಂಡಿಸಿದ್ದರು.

Related posts

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!