June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ಕಲಂ, 454,380,511 ಜೊತೆಗೆ 34 ಐಪಿಸಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿ ನೆಲ್ಯಾಡಿಯ ಶಾಜಿ ಮಗ ಸತೀಶ್ @ ಸ್ಕೋರ್ಪಿಯಾ ಸತೀಶ್(35) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ರವರ ತಂಡದ ಸಿಬ್ಬಂದಿ ಧರ್ಮಸ್ಥಳ ಠಾಣೆಯ ವೃಷಭ, ಚರಣ್ ರಾಜ್, ಬೆಳ್ತಂಗಡಿ ಠಾಣೆಯ ಸಿಬ್ಬಂದಿ ಮುನಿಯ ನಾಯ್ಕ ರವರು ನೆಲ್ಯಾಡಿ ಎಂಬಲ್ಲಿಂದ ಮೇ.4 ಬಂಧಿಸಿ ಸಿಬ್ಬಂದಿ ಶಶಿಕುಮಾರ್ ಮತ್ತು ಚರಣ್ ರಾಜ್ ರವರ ಮುಖೇನ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ ಒಂದು ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ.

Related posts

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya
error: Content is protected !!