August 10, 2026
Uncategorized

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ ಕುವೆಟ್ಟು ಇದರ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಮೇ 04 ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು ಶಿಬಿರಕ್ಕೆ ಚಾಲನೆ ನೀಡಿದರು ಐದು ದಿವಸಗಳಿಂದ ಮಕ್ಕಳಿಗೆ ಶಿಬಿರದಲ್ಲಿ ವಿವಿಧ ಚಟುವಟಿಕೆ ಗಳನ್ನು ನಡೆಸಲಾಯಿತು ಸುಗಮಗಾ ರರಾಗಿ ಆನಂದ ಕೋಟ್ಯಾನ್ ಯೋಗಾಸನ ದ ವಿವಿಧ ಪ್ರಕಾರಗಳು. ಭುವನ್ ಮಕ್ಕಳಿಗೆ ಮನೋರಂಜನೆ ಯನ್ನು, ಸುಲೋಚನಾ ಇವರು ವಿವಿಧ ರೀತಿಯ ಆಟೋಟ ಗಳನ್ನು, ಕುಮಾರಿ ಭುವನೇಶ್ವರಿ ಮಕ್ಕಳಿಗೆ ಕ್ರ್ಯಾಪ್ಟ್ ನ ವಿವಿಧ ಚಟುವಟಿಕೆಗಳನ್ನು, ಜಾಲಜಾಕ್ಷಿ ಇವರು ಮಕ್ಕಳಿಗೆ ಆರೋಗ್ಯ ಮಾಹಿತಿ ಯನ್ನು ನೀಡಿರುತ್ತಾರೆ.

ಶಿಬಿರದಲ್ಲಿ ಹಾಡು ಕುಣಿತ ಗೇಮ್ಸ್, ಓದುವುದು, ಕ್ವಿಜ್ ಸ್ಮರಣೆ ಶಕ್ತಿ ಇವುಗಳನ್ನು ಕೂಡ ಮಕ್ಕಳಿಗೆ ನಡೆಸಲಾಯಿತು. ಸಮಾರೋಪ ಸಮಾರಂಭ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಇಮ್ತಿಯಾಜ್ , ಕಾರ್ಯದರ್ಶಿ ಶ್ರೀಮತಿ ಸೇವಂತಿ ಪಂಚಾಯತ್ ಸಿಬ್ಬಂದಿ ಆನಂದ್ ಕೋಟ್ಯಾನ್ ಇವರು ಭಾಗವಹಿಸಿ ಮಕ್ಕಳಿಗೆ ಹಿತವಚನ ನೀಡಿ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ಹಾಗೂ ಪುಸ್ತಕ ಮತ್ತು ಪೆನ್ ವಿತರಣೆ ಮಾಡಿದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ಯಶೋಧ ಶ್ರೀಮತಿ ಸೌಮ್ಯ ದಿಲೀಪ್ ಕುಲಾಲ್ ಸುಲೋಚನಾ ಇವರು ಕಾರ್ಯಕ್ರಮದಲ್ಲಿ ಸಹಕರಿಸಿ ಗ್ರಂಥಾಲಯ ಮೇಲ್ವಿಚಾರಕರು ಶ್ರೀಮತಿ ವಸಂತಿ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya
error: Content is protected !!