August 10, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಧರ್ಮಸ್ಥಳ-ಪಟ್ರಮೆ ರಸ್ತೆಯ ಬದಿಯಲ್ಲಿ ನೇತ್ರಾವತಿ ವಸತಿಗೃಹದ ಸಮೀಪ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಮೇ.6 ರಂದು ಬೆಳಿಗ್ಗೆ 7:50 ಗಂಟೆ ಸುಮಾರಿಗೆ ಯಾವುದೋ ಕಾಯಿಲೆಯಿಂದ ಅಸ್ವಸ್ಥಗೊಂಡವರನ್ನು 108 ಅಂಬ್ಯುಲೆನ್ಸ್ ಮೂಲಕ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿ ನಂತರ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಪರಿಚಿತ ಗಂಡಸು ಮೇ.8 ರಂದು ಬೆಳಿಗ್ಗೆ 07:56 ಗಂಟೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹದ ಎತ್ತರ 5.9 ಅಡಿ, ದೃಢಕಾಯ ಶರೀರ, ಗೋಧಿ ಮೈಬಣ್ಣ, ದುಂಡು ಮುಖ, ಮುಖದಲ್ಲಿ ಬಿಳಿ ನೆರೆತ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ನೆರೆತ ಕೂದಲು, ಎದೆಯ ಬಳಿ ಕಪ್ಪು ಎಳ್ಳು ಮಚ್ಚೆ ಗುರುತು ಮತ್ತು ಮೃತದೇಹದ ಮೈಮೇಲೆ ಆಸ್ಪತ್ರೆಯ ಬಾಬ್ತು ಡೈಫರ್, ಮತ್ತು ಕೊರಳಿನಲ್ಲಿ ಲೋಹದ ತಾಯಿತಾ ವನ್ನು ಪೊಣಿಸಿದ ಕಪ್ಪು ದಾರ ಧರಿಸಿರುತ್ತಾರೆ. ಮೃತ ವ್ಯಕ್ತಿಯ ವಾರೀಸುದಾರರು/ ಸಂಬಂಧಿಕರು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸು ಠಾಣೆ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಇದ್ದರೆ ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya
error: Content is protected !!