May 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಿಲ್ಲಿಸಿದ ಕಾರಿನಿಂದ ಹಣ ಕಳ್ಳತನ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಲಂ, 379, 201 ಐಪಿಸಿ. ಪ್ರಕರಣದಲ್ಲಿ ಸುಮಾರು ಏಳು ವರ್ಷಗಳಿಂದ ತಲೆಮರೆಸಿದ ಉದ್ಘಾಷಿತ ಆರೋಪಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ, ಸರಗೂರು ನಿವಾಸಿ ನಾರಾಯಣ ಶೆಟ್ಟಿ ಮಗ ಎಸ್ ಏನ್ ಕಿಶೋರ್ (32) ಎಂಬಾತನನ್ನು ಬೆಳ್ತಂಗಡಿ

ಪೊಲೀಸ್ ಉಪ ಅಧಿಕ್ಷಕರು ರೋಹಿಣಿ.ಸಿ.ಕೆ ಮತ್ತು ಪೊಲೀಸ್ ವೃತ್ತ ನಿರೀಕ್ಷಕರು ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಉಪ ನೀರಿಕ್ಷಕರು ಸಮರ್ಥ್ ರವರ ನೇತೃತ್ವದಲ್ಲಿ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ರವರು ಮೇ.7 ರಂದು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಿಂದ ಎಂಬಲ್ಲಿಂದ ಬಂಧಿಸಿ ಮೇ.8 ರಂದು ಬೆಳ್ತಂಗಡಿ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related posts

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!