August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ ಮಂದರ ಅವರಿಗೆ ಕರೆ ಮಾಡಿ ತಿಮರೋಡಿ ವಿರುದ್ಧ ನೀಡಿದ ಕೇಸ್ ವಿಚಾರದಲ್ಲಿ ಹೆದರಿಸಿ ಬೆದರಿಕೆ ಹಾಕಿ ಮುಂಬಯಿಯಲ್ಲಿ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರ ಬಗ್ಗೆ ಎಪ್ರಿಲ್ 29 ರಂದು ಕೆಟ್ಟದಾಗಿ ಬರೆದು ಪ್ರಸಾರ ಮಾಡಲಾಗಿದೆ ಅದಲ್ಲದೆ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸನ್ನ ರವಿ ಮತ್ತು ಇತರರು ಈ ರೀತಿಯ ಪ್ರಯತ್ನ ಮಾಡಿರುತ್ತಾರೆ. ತಿಮರೋಡಿ ವಿರುದ್ಧ ನೀಡಿದ ಪ್ರಕರಣವನ್ನು ವಾಪಸ್ ಪಡೆದು, ತಿಮರೋಡಿ ಪರವಾಗಿ ಸುಳ್ಳು ಸಾಕ್ಷಿ ನೀಡುವಂತೆ ಒತ್ತಡ ಹಾಕಿದ್ದಾರೆ ಎಂದು ಕಲಾವಿದ ಸುಂದರ್ ರೈ ಮಂದರ ಮೇ.7 ರಂದು ದೂರು ನೀಡಿದ್ದಾರೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೇ.7 ರಂದು ರಾತ್ರಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ, ಸತೀಶ್ ಕುಮಾರ್ ರೈ ಪಡುಮಲೆ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಹಾಗೂ ಇತರರ ವಿರುದ್ಧ BNS-2023 (u/s-351(2),232)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!