June 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 10ರಂದು ನಡೆದಿದೆ.

ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರಫಾ ಸದಾನಂದ ಆಚಾರ್ (55) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅವರ ಪತ್ನಿ ಉಷಾ ಆಚಾರ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related posts

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!