June 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 10ರಂದು ನಡೆದಿದೆ.

ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರಫಾ ಸದಾನಂದ ಆಚಾರ್ (55) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅವರ ಪತ್ನಿ ಉಷಾ ಆಚಾರ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya
error: Content is protected !!