June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

ಉಜಿರೆ: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದ ರೋಬೋಟಿಕ್ ಶಸ್ತ್ರಚಿಕಿತ್ಸೆ ಮತ್ತು ಕನ್ವೆನ್ಮನಲ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಉಜಿರೆಯ ಮೂಳೆತಜ್ಞ ಡಾ. ರಜತ್ ಹೆಚ್.ಪಿ ಅವರಿಗೆ ಪ್ರಮಾಣಪತ್ರ ಪ್ರದಾನ ಮಾಡಲಾಗಿದೆ.

ಆರು ತಿಂಗಳ ಫೆಲೋಶಿಪ್ ಕಾರ್ಯಕ್ರಮವು 2025ರ ನವೆಂಬರ್ 1ರಿಂದ 2026ರ ಏಪ್ರಿಲ್ 30ರವರೆಗೆ ನಡೆದಿದ್ದು, ಖ್ಯಾತ ಅಸ್ಥಿ ಮತ್ತು ರೋಬೋಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ತಜ್ಞ ಡಾ. ಸುನಿಲ್ ಜಿ ಕಿಣಿ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗಿದೆ.ಕಾರ್ಯಕ್ರಮದಲ್ಲಿ ರೋಬೋಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ತಂತ್ರಜ್ಞಾನ, ಆಧುನಿಕ ಶಸ್ತ್ರಚಿಕಿತ್ಸಾ ವಿಧಾನಗಳು ಹಾಗೂ ಅಸ್ಥಿ ಚಿಕಿತ್ಸೆಯ ನೂತನ ತಂತ್ರಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗಿದೆ. ಈ ಸಾಧನೆಗೆ ವೈದ್ಯಕೀಯ ವಲಯದಿಂದ ಹಾಗೂ ಸ್ನೇಹಿತರಿಂದ ಅಭಿನಂದನೆಗಳು ವ್ಯಕ್ತವಾಗಿವೆ.

ಡಾ.ರಜತ್ ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆಂತರಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಇವರ ಈ ಸಾಧನೆಗೆ ಉಜಿರೆ ಎಸ್‌ಡಿಎಂ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ.ಜನಾರ್ದನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya
error: Content is protected !!