June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

ಉಜಿರೆ: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದ ರೋಬೋಟಿಕ್ ಶಸ್ತ್ರಚಿಕಿತ್ಸೆ ಮತ್ತು ಕನ್ವೆನ್ಮನಲ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಉಜಿರೆಯ ಮೂಳೆತಜ್ಞ ಡಾ. ರಜತ್ ಹೆಚ್.ಪಿ ಅವರಿಗೆ ಪ್ರಮಾಣಪತ್ರ ಪ್ರದಾನ ಮಾಡಲಾಗಿದೆ.

ಆರು ತಿಂಗಳ ಫೆಲೋಶಿಪ್ ಕಾರ್ಯಕ್ರಮವು 2025ರ ನವೆಂಬರ್ 1ರಿಂದ 2026ರ ಏಪ್ರಿಲ್ 30ರವರೆಗೆ ನಡೆದಿದ್ದು, ಖ್ಯಾತ ಅಸ್ಥಿ ಮತ್ತು ರೋಬೋಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ತಜ್ಞ ಡಾ. ಸುನಿಲ್ ಜಿ ಕಿಣಿ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗಿದೆ.ಕಾರ್ಯಕ್ರಮದಲ್ಲಿ ರೋಬೋಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ತಂತ್ರಜ್ಞಾನ, ಆಧುನಿಕ ಶಸ್ತ್ರಚಿಕಿತ್ಸಾ ವಿಧಾನಗಳು ಹಾಗೂ ಅಸ್ಥಿ ಚಿಕಿತ್ಸೆಯ ನೂತನ ತಂತ್ರಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗಿದೆ. ಈ ಸಾಧನೆಗೆ ವೈದ್ಯಕೀಯ ವಲಯದಿಂದ ಹಾಗೂ ಸ್ನೇಹಿತರಿಂದ ಅಭಿನಂದನೆಗಳು ವ್ಯಕ್ತವಾಗಿವೆ.

ಡಾ.ರಜತ್ ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆಂತರಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಇವರ ಈ ಸಾಧನೆಗೆ ಉಜಿರೆ ಎಸ್‌ಡಿಎಂ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ.ಜನಾರ್ದನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya
error: Content is protected !!