ಉಜಿರೆ: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದ ರೋಬೋಟಿಕ್ ಶಸ್ತ್ರಚಿಕಿತ್ಸೆ ಮತ್ತು ಕನ್ವೆನ್ಮನಲ್ ಜಾಯಿಂಟ್ ರಿಪ್ಲೇಸ್ಮೆಂಟ್ ಫೆಲೋಶಿಪ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಉಜಿರೆಯ ಮೂಳೆತಜ್ಞ ಡಾ. ರಜತ್ ಹೆಚ್.ಪಿ ಅವರಿಗೆ ಪ್ರಮಾಣಪತ್ರ ಪ್ರದಾನ ಮಾಡಲಾಗಿದೆ.
ಆರು ತಿಂಗಳ ಫೆಲೋಶಿಪ್ ಕಾರ್ಯಕ್ರಮವು 2025ರ ನವೆಂಬರ್ 1ರಿಂದ 2026ರ ಏಪ್ರಿಲ್ 30ರವರೆಗೆ ನಡೆದಿದ್ದು, ಖ್ಯಾತ ಅಸ್ಥಿ ಮತ್ತು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ತಜ್ಞ ಡಾ. ಸುನಿಲ್ ಜಿ ಕಿಣಿ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗಿದೆ.ಕಾರ್ಯಕ್ರಮದಲ್ಲಿ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ತಂತ್ರಜ್ಞಾನ, ಆಧುನಿಕ ಶಸ್ತ್ರಚಿಕಿತ್ಸಾ ವಿಧಾನಗಳು ಹಾಗೂ ಅಸ್ಥಿ ಚಿಕಿತ್ಸೆಯ ನೂತನ ತಂತ್ರಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗಿದೆ. ಈ ಸಾಧನೆಗೆ ವೈದ್ಯಕೀಯ ವಲಯದಿಂದ ಹಾಗೂ ಸ್ನೇಹಿತರಿಂದ ಅಭಿನಂದನೆಗಳು ವ್ಯಕ್ತವಾಗಿವೆ.













