28 C
ಪುತ್ತೂರು, ಬೆಳ್ತಂಗಡಿ
August 11, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

ಬೆಳ್ತಂಗಡಿ: ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಕಳೆದ 20 ವರ್ಷಗಳಿಂದ ಕ್ಯಾಂಟಿನ್ ನಡೆಸುತ್ತಿದ್ದರು. ಈ ಕ್ಯಾಂಟಿನ್ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ ಕ್ಯಾಂಟಿನ್ ಒಳಗಡೆ ಬೆಡ್ ರೂಂ, ಶೌಚಾಲಯ ವ್ಯವಸ್ಥೆ ಮಾಡಿಕೊಂಡು ಮಹಿಳೆಯನ್ನು ಕರೆದುಕೊಂಡು ಬಂದು ಹಣ ಮಾಡುವ ಉದ್ದೇಶದಿಂದ ಗಿರಾಕಿಗಳನ್ನು ಕರೆಸಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದರು.

ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.10 ರಂದು ಸಂಜೆ 5 ಗಂಟೆಗೆ ಕ್ಯಾಂಟಿನ್ ಮೇಲೆ ದಾಳಿ ಮಾಡಿದಾಗ ವೇಶ್ಯಾವಟಿಕೆ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಂಟಿನ್ ಒಳಗಡೆ ಮಾಲೀಕ ಸುಂದರ್ ಶೆಟ್ಟಿ(55), ಗಿರಾಕಿಗಳಾದ ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಚಾಲಕ ವೃತ್ತಿ ಮಾಡುವ ಹುಸ್ಮಾನ್(38), ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತದ ಗ್ರಾಮದ ಕಲ್ಲೇರಿ ನಿವಾಸಿ ಹೈದಾರ್(45) ಮೂವರನ್ನು ಬಂಧಿಸಿದ್ದಾರೆ.

29 ವರ್ಷದ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಮೊಬೈಲ್ ಫೋನ್, 5 ಸಾವಿರ ಹಣ, ನಿರೋಧ್ ಗಳು ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಮಡಂತ್ಯಾರು ನೇಸರ ಸಂಜೀವಿನಿ ಒಕ್ಕೂಟದ ಮಸಾಲಾ ಉತ್ಪನ್ನಗಳ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya
error: Content is protected !!