38.2 C
ಪುತ್ತೂರು, ಬೆಳ್ತಂಗಡಿ
May 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.

ಮೇ 18ರಂದು ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಮೇ ೧೯ರಂದು ರಾತ್ರಿ ಮಹಾರಥೋತ್ಸವ, ಮೇ 21ರಂದು ಪೂರ್ವಾಹ್ನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ ಜರುಗಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು: ಮೇ 17 ರಂದು ಸಂಜೆ ನೃತ್ಯಭೂಷಿಣಿ ಕಲಾ ಶಾಲೆ ಶಿಶಿಲ ಇದರ ವಿದ್ಯಾರ್ಥಿಗಳಿಂದ ಭರತನಾಟ್ಯ. ಮೇ 18ರಂದು ಸಂಜೆ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಕಲಾಕೇಂದ್ರ ಶಿಶಿಲ ಇದರ ವಿದ್ಯಾರ್ಥಿಗಳ ರಂಗಪ್ರವೇಶ ಮತ್ತು ಶ್ರೀ ಶಿಶಿಲೇಶ್ವರ ಮಹಿಳಾ ಮತ್ತು ಮಕ್ಕಳ ಯಕ್ಷಕಲಾ ಸಂಘ ಶಿಶಿಲ ಇವರಿಂದ ವೀರಮಣಿ ಕಾಳಗ ಯಕ್ಷಗಾನ ಪ್ರಸಂಗ ಜರುಗಲಿದೆ.

Related posts

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya
error: Content is protected !!