August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

ಉಜಿರೆ: ಸದಾ ವಿಶೇಷವಾದ ಮತ್ತು ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ NABH  ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಯಿತು.

ಆಸ್ಪತ್ರೆಯ ಸಿಬ್ಬಂದಿಗಳಲ್ಲಿ ತಾಯಿ ಸ್ಥಾನದಲ್ಲಿರುವ ಉದ್ಯೋಗಿಗಳನ್ನು ಗುರುತಿಸಿ, ಅವರ ಮಕ್ಕಳೊಂದಿಗೆ ಬರುವಂತೆ ತಿಳಿಸಿ, ಮಕ್ಕಳೊಂದಿಗೆ ತಾಯಂದಿರಿಗೆ ನುಡಿ ನಮನ ಸಮರ್ಪಿಸಲಾಯಿತು. 7ನೇ ತರಗತಿಗೆ ಪಾದಾರ್ಪಣೆ ಮಾಡಿದ ಮತ್ತು 7 ನೇ ತರಗತಿ ಮುಗಿಸಿದ 10 ನೇ ತರಗತಿಗೆ ಪಾದಾರ್ಪಣೆ ಮಾಡಿದ ಮತ್ತು 10 ನೇ ತರಗತಿ ಮುಗಿಸಿದ ಹಾಗೂ ಪದವಿಪೂರ್ವ ತರಗತಿಯಲ್ಲಿ ಓದುತ್ತಿರುವ ಆಸ್ಪತ್ರೆಯ ಸಿಬ್ಬಂದಿಗಳ ಮಕ್ಕಳನ್ನು ಆಹ್ವಾನಿಸಿ ಅವರಿಗಾಗಿ ಅಭಿನಂದನೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು.

ಆಸ್ಪತ್ರೆಯ ವತಿಯಿಂದ ಎಲ್ಲ ಮಕ್ಕಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಅಲ್ಲದೆ, ಈ ವರ್ಷದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿ ಪಡೆದಂತ 3 ವಿದ್ಯಾರ್ಥಿಗಳಿಗೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಗೋಪಾಲಕೃಷ್ಣ ಮತ್ತು ಡಾ.ಭಾರತಿ ದಂಪತಿಗಳು ಹಾರ ಹಾಕಿ ಶಾಲು ಹೊದಿಸಿ , ಸ್ಮರಣಿಕೆ ನೀಡಿ ವಿಶೇಷವಾಗಿ ಅಭಿನಂದಿಸಿದರು.

ಉಜಿರೆಯ ಪ್ರಸಿದ್ಧ ದಂತ ವೈದ್ಯರಾದ ಡಾ.ದೀಪಾಲಿ ಡೊಂಗ್ರೆಯವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ಕುರಿತು ಕೈಗೊಳ್ಳಬೇಕಾದ ಸಿದ್ಧತೆಯ ಕುರಿತು ಉಪಯುಕ್ತ ಮತ್ತು ಪ್ರಸ್ತುತವಾದ ಮಾಹಿತಿ ನೀಡಿದರು .
ಅಧ್ಯಕ್ಷ ಸ್ಥಾನದಿಂದ ವೈದ್ಯಕೀಯ ನಿರ್ದೇಶಕರಾದ ಡಾ.ಗೋಪಾಲಕೃಷ್ಣ ರವರು ಮಾತನಾಡುತ್ತ ಕಣ್ಣಿಗೆ ಕಾಣುವ ದೇವರೆಂದರೆ ಅದು ತಾಯಿ ಮಾತ್ರ ಎಂದು ತಮ್ಮ ತಾಯಿಯ ತ್ಯಾಗವನ್ನು ಭಾವುಕರಾಗಿ ನೆನೆಸಿಕೊಂಡರು ಮತ್ತು ಸದಾ ರೋಗಿಗಳ ಶುಶ್ರುಷೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವಾಗ ಈ ದಿನ ಮಕ್ಕಳೊಡನೆ ನಾನೂ ಒಂದು ಮಗುವಾಗಿ ಬೆರೆಯುವ ಮತ್ತು ಕೆಲಸದ ಒತ್ತಡ ಮತ್ತು ಜಂಜಾಟಗಳಿಂದ ದೂರವಾಗಿ ಅನುಭೂತಿಯ ಆನಂದವನ್ನು ಅನುಭವಿಸುತ್ತಿದ್ದೇನೆ ಮತ್ತು ಹೊಸ ಉತ್ಸಾಹವನ್ನು ಪಡೆದಿದ್ದೇನೆಂದು ಹೇಳುತ್ತಾ ಸೇರಿದ ತಾಯಂದಿರಿಗೆ ಮತ್ತು ಮಕ್ಕಳಿಗೆ ಅಭಿನಂದಿಸಿದರು.
ಡಾ. ಭಾರತಿ ಜಿ.ಕೆ ಯವರು ಕಾರ್ಯಕ್ರಮದ ಸ್ಥೂಲ ವಿವರಣೆ ನೀಡುತ್ತಾ ಪ್ರಾಸ್ತಾವಿಕವಾಗಿ ಮಾತನಾಡಿದರು ಮತ್ತು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಡಾ.ಅಂಕಿತ ಜಿ ಭಟ್ ಮತ್ತು ಡಾ.ನವ್ಯ ಭಟ್ ಉಪಸ್ಥಿತರಿದ್ದರು.

Related posts

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!