28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಸುವರ್ಣ ಮಹೋತ್ಸವ ಸಮಿತಿ ಜಯನಗರ-ಗುರಿಪಳ್ಳ ಇವರ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್ ಉಜಿರೆ-ಬೆನಕ ಚಾರೀಟೇಬಲ್ ಟ್ರಸ್ಟ್ ಉಜಿರೆ, ಆಳ್ವಾಸ್ ಹೆಲ್ತ್ ಸೆಂಟರ್ ಮೂಡುಬಿದಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇವುಗಳ ಸಹಭಾಗಿತ್ವದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ ಮೇ 17 ರಂದು ಜಯನಗರದ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 9:೦೦ ರಿಂದ ಮಧ್ಯಾಹ್ನ 1:30 ರವರೆಗೆ ಜರುಗಲಿದೆ.

ಶಿಬಿರದ ಉದ್ಘಾಟನೆಯನ್ನು ಉಜಿರೆಯ ಬೆನಕ ಹೆಲ್ತ್ ಸೆಂಟರ್‌ನ ಆಡಳಿತ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕೆ. ನೆರವೇರಿಸಲಿದ್ದಾರೆ. ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಸದಾನಂದ ಪೂಜಾರಿ, ಕೋಡೆಕ್ಕಲ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೊ.ಶ್ರೀಧರ ಕೆವಿ, ಡಾ. ವಿಶ್ವ ವಿಜೇತ್, ಡಾ. ಗಣೇಶ್ ಪ್ರಸಾದ್, ಡಾ. ಆದರ್ಶ್ ಕೆ. ಎಸ್. ಮತ್ತು ಪ್ರಕಾಶ್ ಫೆರ್ನಾಂಡಿಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya
error: Content is protected !!