30.8 C
ಪುತ್ತೂರು, ಬೆಳ್ತಂಗಡಿ
May 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಸುವರ್ಣ ಮಹೋತ್ಸವ ಸಮಿತಿ ಜಯನಗರ-ಗುರಿಪಳ್ಳ ಇವರ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್ ಉಜಿರೆ-ಬೆನಕ ಚಾರೀಟೇಬಲ್ ಟ್ರಸ್ಟ್ ಉಜಿರೆ, ಆಳ್ವಾಸ್ ಹೆಲ್ತ್ ಸೆಂಟರ್ ಮೂಡುಬಿದಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇವುಗಳ ಸಹಭಾಗಿತ್ವದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ ಮೇ 17 ರಂದು ಜಯನಗರದ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 9:೦೦ ರಿಂದ ಮಧ್ಯಾಹ್ನ 1:30 ರವರೆಗೆ ಜರುಗಲಿದೆ.

ಶಿಬಿರದ ಉದ್ಘಾಟನೆಯನ್ನು ಉಜಿರೆಯ ಬೆನಕ ಹೆಲ್ತ್ ಸೆಂಟರ್‌ನ ಆಡಳಿತ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕೆ. ನೆರವೇರಿಸಲಿದ್ದಾರೆ. ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಸದಾನಂದ ಪೂಜಾರಿ, ಕೋಡೆಕ್ಕಲ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೊ.ಶ್ರೀಧರ ಕೆವಿ, ಡಾ. ವಿಶ್ವ ವಿಜೇತ್, ಡಾ. ಗಣೇಶ್ ಪ್ರಸಾದ್, ಡಾ. ಆದರ್ಶ್ ಕೆ. ಎಸ್. ಮತ್ತು ಪ್ರಕಾಶ್ ಫೆರ್ನಾಂಡಿಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya
error: Content is protected !!