August 11, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

ಬೆಳ್ತಂಗಡಿ: ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಕಳೆದ 20 ವರ್ಷಗಳಿಂದ ಕ್ಯಾಂಟಿನ್ ನಡೆಸುತ್ತಿದ್ದರು. ಈ ಕ್ಯಾಂಟಿನ್ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ ಕ್ಯಾಂಟಿನ್ ಒಳಗಡೆ ಬೆಡ್ ರೂಂ, ಶೌಚಾಲಯ ವ್ಯವಸ್ಥೆ ಮಾಡಿಕೊಂಡು ಮಹಿಳೆಯನ್ನು ಕರೆದುಕೊಂಡು ಬಂದು ಹಣ ಮಾಡುವ ಉದ್ದೇಶದಿಂದ ಗಿರಾಕಿಗಳನ್ನು ಕರೆಸಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದರು.

ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.10 ರಂದು ಸಂಜೆ 5 ಗಂಟೆಗೆ ಕ್ಯಾಂಟಿನ್ ಮೇಲೆ ದಾಳಿ ಮಾಡಿದಾಗ ವೇಶ್ಯಾವಟಿಕೆ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಂಟಿನ್ ಒಳಗಡೆ ಮಾಲೀಕ ಸುಂದರ್ ಶೆಟ್ಟಿ(55), ಗಿರಾಕಿಗಳಾದ ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಚಾಲಕ ವೃತ್ತಿ ಮಾಡುವ ಹುಸ್ಮಾನ್(38), ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತದ ಗ್ರಾಮದ ಕಲ್ಲೇರಿ ನಿವಾಸಿ ಹೈದಾರ್(45) ಮೂವರನ್ನು ಬಂಧಿಸಿದ್ದಾರೆ.

29 ವರ್ಷದ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಮೊಬೈಲ್ ಫೋನ್, 5 ಸಾವಿರ ಹಣ, ನಿರೋಧ್ ಗಳು ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಯಶಸ್ವಿಗೊಳಿಸಲು ಬೆಳ್ತಂಗಡಿಯಲ್ಲಿ ಶ್ರಮಿಕ ಸೇವಾ ಟ್ರಸ್ಟ್ ನಿಂದ ಪೂರ್ವಭಾವಿ ಕಾರ್ಯಾಗಾರ

Suddi Udaya

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

Suddi Udaya
error: Content is protected !!