ಬೆಳ್ತಂಗಡಿ: ಪುತ್ತೂರು ತಾಲೂಕು ಬಾರಿಕೆ ವಳಾಲ್ ಬಸದಿ ಭಗವಾನ್ ೧00೮ ಶ್ರೀ ಶ್ರೀ ಪಾರ್ಶ್ವನಾಥ ಸ್ವಾಮಿ ತೀರ್ಥಂಕರರ ಧಾಮಸಂಪ್ರೋಕ್ಷಣ ಪೂರ್ವಕ ಜಿನ ಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ ಸಂದರ್ಭದಲ್ಲಿ ಸಂಪೂರ್ಣ ಸಹಕಾರ ನೀಡಿ ಸಹಕರಿಸಿದ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್ ರವನ್ನು ಮೂಡುಬಿದ್ರಿ ಜೈನ್ ಮಠದ ಪರಮಪೂಜ್ಯ ಜಗದ್ಗುರು ಡಾ. ಚಾರು ಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿಯವರು ಶ್ರೀ ಮಠದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಧನಕೀರ್ತಿ ಜೈನ್ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.













