23.3 C
ಪುತ್ತೂರು, ಬೆಳ್ತಂಗಡಿ
August 13, 2026
Uncategorized

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಮಿತ್ತಬಾಗಿಲು, ಮಲವಂತಿಗೆ, ದಿಡುಪೆ, ಅಳದಂಗಡಿ ಮೊದಲಾದ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆ ಸುರಿದಿದೆ.

ಬೆಳ್ತಂಗಡಿ ನಗರ, ವೇಣೂರು, ಉಜಿರೆ, ಲಾಯಿಲ, ಕನ್ಯಾಡಿ, ಶಿರ್ಲಾಲು, ಗುರಿಪಳ್ಳ, ಮುಂಡಾಜೆ, ಕಲ್ಮಂಜ ಮುಂತಾದ ಕಡೆ ಸಾಮಾನ್ಯ ಮಳೆಯಾಗಿದೆ.

ಕೊಲ್ಲಿ-ಕಿಲ್ಲೂರು- ಬಂಗಾಡಿ-ಲಾಯಿಲ ರಸ್ತೆಯಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಮರವು ವಿದ್ಯುತ್ ಲೈನ್ ಮೇಲೆಯೂ ಬಿದ್ದ ಕಾರಣ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು.
ಕಳೆದ ಕೆಲವು ದಿನಗಳಿಂದ ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಮಳೆ ಸುರಿಯದೆ ಭಾರಿ ಸೆಕೆಯ ವಾತವರಣ ನಿರ್ಮಾಣವಾಗಿತ್ತು. ಮಳೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಯಥಾಪ್ರಕಾರ ವಿದ್ಯುತ್ ಹಾಗೂ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡುಬಂದಿದೆ.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!