June 27, 2026
Uncategorized

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಮಿತ್ತಬಾಗಿಲು, ಮಲವಂತಿಗೆ, ದಿಡುಪೆ, ಅಳದಂಗಡಿ ಮೊದಲಾದ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆ ಸುರಿದಿದೆ.

ಬೆಳ್ತಂಗಡಿ ನಗರ, ವೇಣೂರು, ಉಜಿರೆ, ಲಾಯಿಲ, ಕನ್ಯಾಡಿ, ಶಿರ್ಲಾಲು, ಗುರಿಪಳ್ಳ, ಮುಂಡಾಜೆ, ಕಲ್ಮಂಜ ಮುಂತಾದ ಕಡೆ ಸಾಮಾನ್ಯ ಮಳೆಯಾಗಿದೆ.

ಕೊಲ್ಲಿ-ಕಿಲ್ಲೂರು- ಬಂಗಾಡಿ-ಲಾಯಿಲ ರಸ್ತೆಯಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಮರವು ವಿದ್ಯುತ್ ಲೈನ್ ಮೇಲೆಯೂ ಬಿದ್ದ ಕಾರಣ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು.
ಕಳೆದ ಕೆಲವು ದಿನಗಳಿಂದ ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಮಳೆ ಸುರಿಯದೆ ಭಾರಿ ಸೆಕೆಯ ವಾತವರಣ ನಿರ್ಮಾಣವಾಗಿತ್ತು. ಮಳೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಯಥಾಪ್ರಕಾರ ವಿದ್ಯುತ್ ಹಾಗೂ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡುಬಂದಿದೆ.

Related posts

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya
error: Content is protected !!