23.3 C
ಪುತ್ತೂರು, ಬೆಳ್ತಂಗಡಿ
August 13, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

ಉಜಿರೆ: ಉದ್ಯಮ ಮತ್ತು ಸಮಾಜ ಸೇವೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನವು ಓಶಿಯನ್ ಪರ್ಲ್ ಹೋಟೇಲ್ ನಲ್ಲಿ ಮೇ 11ರಂದು ನಡೆಯಿತು.

ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ‌ಎಸ್ ಮಾತನಾಡಿ ಜಿಲ್ಲೆಯ ಪ್ರಸಿದ್ದ ಉದ್ಯಮಿ ರಾಜೇಶ್ ಪೈ ಅವರು ಕಳೆದ ಮೂರುವರೆ ದಶಕಗಳಿಂದ ಉದ್ಯಮ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಶಕ್ತಿಯಾಗಿದ್ದಾರೆ ಎಂದರು.

ವರ್ತಕರ ಸಂಘದ ಗೌರವ ಸ್ವೀಕರಿಸಿ ಮಾತನಾಡಿದ ರಾಜೇಶ್ ಪೈ ಅವರು ಉಜಿರೆಯಲ್ಲಿ ಸುಮಾರು 900ಕ್ಕೂ ಹೆಚ್ಚು ಅಂಗಡಿಗಳಿವೆ. ಉಜಿರೆ ನನ್ನನ್ನು ಬೆಳೆಸಿದ ಊರು. ಸಣ್ಣ ಪ್ರಾಯದಲ್ಲೇ ತಂದೆಯವರೊಂದಿಗೆ ನಾನು ಅಂಗಡಿಗಳಲ್ಲಿ ವ್ಯಾಪರ ಮಾಡಲು ಪ್ರಾರಂಬಿಸಿದೆ.ಈ ಪ್ರಶಸ್ತಿಯನ್ನು ಉಜಿರೆ ಊರಿಗೆ, ಶ್ರೀ ಮಂಜುನಾಥ ಸ್ವಾಮಿ, ಶ್ರೀ ಜನಾರ್ದನ ಸ್ವಾಮಿಗೆ ಹಾಗೂ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅರ್ಪಿಸುತ್ತೇನೆ. ಬೆಳ್ತಂಗಡಿ ತಾಲೂಕಿನಲ್ಲಿ ಅತೀ ಬೇಗ ಬೆಳೆದ ನಗರ ಉಜಿರೆ. ಶಿಕ್ಷಣ ಕ್ಷೇತ್ರಗಳು ಬೆಳೆದಿದೆ. ಎಲ್ಲರಿಗೂ ವ್ಯಾಪರ ಇದೆ. ಆದರೆ ಉಜಿರೆಯ ಇವತ್ತಿನ ಪರಿಸ್ಥಿತಿ ನೋಡುವಾಗ ಬೇಜಾರಾಗುತ್ತದೆ. ಉಜಿರೆ ಲವಲವಿಕೆಯಿಂದ ಇರಬೇಕು. ಸದಾ ಸಹಕಾ ಸಹಬಾಳ್ವೆಯಿಂದ ಇರುವಂತಾಗಬೇಕು.ವರ್ತಕರ ಸಂಘದ ಜೊತೆ ಸದಾ ಇರುತ್ತೇನೆ ಎಂದರು.

ವರ್ತಕರಾದ ರವಿ ಕುಮಾರ್ ಬರಮೇಲು ಮಾತನಾಡಿ ರಾಜೇಶ್ ಪೈ ಅವರಿಗೆ ಇಂತಹ ಪ್ರಶಸ್ತಿ ಬಂದಿರುವುದು ನಮಗೆ ತುಂಬಾ ಸಂತೋಷವಾಗಿದೆ. ಸರಳ, ಸಜ್ಜನಿಕೆಯ ವ್ಯಕ್ತಿತ್ವ ರಾಜೇಶ್ ಅವರದು. ‌ಯಾವುದೇ ಕಾರ್ಯಕ್ರಮಕ್ಕೂ ಪೂರ್ಣ ಪ್ರಮಾಣದ ಸಹಕಾರ ನೀಡುತ್ತಿದ್ದರು ಎಂದರು.

ಹಳ್ಳಿಮನೆ ಪ್ರವೀಣ್ ಫೆರ್ನಾಂಡೀಸ್ ಅವರು ಮಾತನಾಡಿ 2013ರಲ್ಲಿ ಉಜಿರೆಯಲ್ಲಿ ಉದ್ಯಮ ಮಾಡುವಾಗ,ಕಷ್ಟದ ಸಮಯದಲ್ಲಿ ನನಗೆ ತುಂಬಾ ಸಹಕಾರ ನೀಡಿದವರು ರಾಜೇಶ್ ಪೈ ಅವರು ಎಂದರು.

ವೇದಿಕೆಯಲ್ಲಿ ವರ್ತಕರ ಸಂಘದ ನಿಕಟಪೂರ್ವಾಧ್ಯಕ್ಷ ಅರವಿಂದ್ ಕಾರಂತ್, ಪ್ರ‌.ಕಾರ್ಯದರ್ಶಿ ವಿಶ್ವನಾಥ ಭಂಡಾರಿ, ಕೋಶಾಧಿಕಾರಿ ಅಬೂಬಕ್ಕರ್ ಉಪಸ್ಥಿತರಿದ್ದರು.

ರಾಜೇಶ್ ಪೈ ಅವರನ್ನು ವರ್ತಕರು ಫಲ ಪುಷ್ಪ ನೀಡಿ, ಹಾರ, ಶಾಲು ಹಾಕಿ, ಮೈಸೂರು ಪೇಟ ಧರಿಸಿ, ಹೂ ಗುಚ್ಚ ನೀಡಿ ಸನ್ಮಾನಿಸಿ, ಗೌರವಿಸಿದರು.

Related posts

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya
error: Content is protected !!