May 12, 2026
Uncategorized

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಮಿತ್ತಬಾಗಿಲು, ಮಲವಂತಿಗೆ, ದಿಡುಪೆ, ಅಳದಂಗಡಿ ಮೊದಲಾದ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆ ಸುರಿದಿದೆ.

ಬೆಳ್ತಂಗಡಿ ನಗರ, ವೇಣೂರು, ಉಜಿರೆ, ಲಾಯಿಲ, ಕನ್ಯಾಡಿ, ಶಿರ್ಲಾಲು, ಗುರಿಪಳ್ಳ, ಮುಂಡಾಜೆ, ಕಲ್ಮಂಜ ಮುಂತಾದ ಕಡೆ ಸಾಮಾನ್ಯ ಮಳೆಯಾಗಿದೆ.

ಕೊಲ್ಲಿ-ಕಿಲ್ಲೂರು- ಬಂಗಾಡಿ-ಲಾಯಿಲ ರಸ್ತೆಯಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಮರವು ವಿದ್ಯುತ್ ಲೈನ್ ಮೇಲೆಯೂ ಬಿದ್ದ ಕಾರಣ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು.
ಕಳೆದ ಕೆಲವು ದಿನಗಳಿಂದ ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಮಳೆ ಸುರಿಯದೆ ಭಾರಿ ಸೆಕೆಯ ವಾತವರಣ ನಿರ್ಮಾಣವಾಗಿತ್ತು. ಮಳೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಯಥಾಪ್ರಕಾರ ವಿದ್ಯುತ್ ಹಾಗೂ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡುಬಂದಿದೆ.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya
error: Content is protected !!