23.3 C
ಪುತ್ತೂರು, ಬೆಳ್ತಂಗಡಿ
August 13, 2026
Uncategorized

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಮಿತ್ತಬಾಗಿಲು, ಮಲವಂತಿಗೆ, ದಿಡುಪೆ, ಅಳದಂಗಡಿ ಮೊದಲಾದ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆ ಸುರಿದಿದೆ.

ಬೆಳ್ತಂಗಡಿ ನಗರ, ವೇಣೂರು, ಉಜಿರೆ, ಲಾಯಿಲ, ಕನ್ಯಾಡಿ, ಶಿರ್ಲಾಲು, ಗುರಿಪಳ್ಳ, ಮುಂಡಾಜೆ, ಕಲ್ಮಂಜ ಮುಂತಾದ ಕಡೆ ಸಾಮಾನ್ಯ ಮಳೆಯಾಗಿದೆ.

ಕೊಲ್ಲಿ-ಕಿಲ್ಲೂರು- ಬಂಗಾಡಿ-ಲಾಯಿಲ ರಸ್ತೆಯಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಮರವು ವಿದ್ಯುತ್ ಲೈನ್ ಮೇಲೆಯೂ ಬಿದ್ದ ಕಾರಣ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು.
ಕಳೆದ ಕೆಲವು ದಿನಗಳಿಂದ ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಮಳೆ ಸುರಿಯದೆ ಭಾರಿ ಸೆಕೆಯ ವಾತವರಣ ನಿರ್ಮಾಣವಾಗಿತ್ತು. ಮಳೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಯಥಾಪ್ರಕಾರ ವಿದ್ಯುತ್ ಹಾಗೂ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡುಬಂದಿದೆ.

Related posts

ಮಧ್ವ ಯಕ್ಷಕೂಟ:ವಾರ್ಷಿಕೋತ್ಸವ, ಸಮ್ಮಾನಸನಾತರ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ: ರಾಘವೇಂದ್ರ ಭಟ್

Suddi Udaya

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya
error: Content is protected !!