June 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾರದ ಸಂತೆಗೆ ಸ್ಥಳಾವಕಾಶ ಕೊರತೆ: ವ್ಯಾಪಾರಿಗಳು ವಾಪಾಸು

ಬೆಳ್ತಂಗಡಿ: ಬೆಳ್ತಂಗಡಿಯ ಸೋಮವಾರ ಸಂತೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಅಡ್ಡಿಯಾಗಿದ್ದು, ಇದರಿಂದ ವ್ಯಾಪಾರಿಗಳು ಬಾರೀ ಸಮಸ್ಯೆ ಎದುರಿಸುವಂತಾಗಿದೆ. ಕಳೆದ ವಾರ ಬಹಳ ಕಷ್ಟಪಟ್ಟು ವ್ಯಾಪಾರ ನಡೆಸಿದ ಸಂತೆ ವ್ಯಾಪಾರಿಗಳು ಈ ಬಾರೀ ವ್ಯಾಪಾರಕ್ಕೆ ಸ್ಥಳಾವಾಕಾಶ ಇಲ್ಲದೇ ವಾಪಾಸು ತೆರಳುವಂತಾಗಿದೆ.

ಬೆಳ್ತಂಗಡಿಯಲ್ಲಿ ಸಂತೆ ಮಾರುಕಟ್ಟೆ ವ್ಯವಸ್ಥೆ ಸರಿಯಾಗಿ ಇಲ್ಲ. ಇರುವ ಸಂತೆ ಪ್ರಾಂಗಣದಲ್ಲಿ ಏಲಂ ಮೂಲಕ ಪಡೆದು ನಿತ್ಯ ವ್ಯಾಪಾರ ನಡೆಸುವವರು ಇದ್ದಾರೆ. ಉಳಿದಂತೆ ನಾಲ್ಕೈದು ವ್ಯಾಪಾರಿಗಳಿಗಷ್ಟೇ ಅವಕಾಶ ಇದೆ. ಉಳಿದವರು ರಸ್ತೆ ಬದಿ ವ್ಯಾಪಾರ ನಡೆಸುವವರು. ಸದ್ಯ, ಹೆದ್ದಾರಿ ಕಾಮಗಾರಿಗೆ ಎರಡೂ ಬಳಿ ಅಗೆಯಲಾಗಿದ್ದು ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ.
ಕಳೆದ ಸೋಮವಾರವೂ ರಸ್ತೆ ಬದಿ ಸಂತೆ ವ್ಯಾಪಾರದಿಂದ ಸಮಸ್ಯೆ ಉಂಟಾಗಿತ್ತು. ಹೀಗಾಗಿ ಈ ಭಾರಿ ಕಾಮಗಾರಿ ನಡೆಸುವಲ್ಲಿ ಸಂತೆ ವ್ಯಾಪಾರಕ್ಕೆ ಅವಕಾಶ ನೀಡಲಿಲ್ಲ. ವ್ಯಾಪಾರಕ್ಕೆ ಅವಕಾಶ ಇಲ್ಲದೇ ಕೆಲ ವ್ಯಾಪಾರಿಗಳು ಮಾರಿಗುಡಿ ಎದುರಿನ ರಸ್ತೆಯಲ್ಲಿ ವ್ಯಾಪಾರ ನಡೆಸಿದರೆ, ಉಳಿದ 15ಕ್ಕೂ ಹೆಚ್ಚು ವ್ಯಾಪಾರಿಗಳು ಸಂತೆ ವ್ಯಾಪಾರಕ್ಕೆ ಅವಕಾಶ ಇಲ್ಲದೇ ವಾಪಾಸು ತೆರಳಿದ್ದಾರೆ.

ಬೆಳ್ತಂಗಡಿ, ದೊಡ್ಡ ನಗರವಾದರೂ ಸಂತೆ ವ್ಯಾಪಾರಕ್ಕೆ ಸುಸರ್ಜಿತ ಮಾರುಕಟ್ಟೆ ಇರದೇ ಇರುವುದು ವಿಪರ್ಯಾಸ. ಸಂತೆ ವ್ಯಾಪಾರದ ಸುಂಕ ತೆಗೆದುಕೊಳ್ಳಲು ಬರುತ್ತಾರೆ ಆದರೆ ಸರಿಯಾದ ವ್ಯವಸ್ಥೆ ಮಾಡುವುದಿಲ್ಲ. ನಮ್ಮ ಪರಿಸ್ಥಿತಿ ಯಾರಿಗೂ ಬೇಡವಾಗಿದೆ. ಶಾಸಕರು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ವ್ಯಾಪಾರಿಗಳು ಬೇಸರ ತೋಡಿಕೊಂಡಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya
error: Content is protected !!