June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕೇರಳ ಭಾಷಿಗರ ಅನೇಕ ಕುಟಯಂಬಗಳು ಬೆಳ್ತಂಗಡಿಯಲ್ಲಿ ವಾಸಿಸುತ್ತಿದ್ದು ತವರು ರಾಜ್ಯದ ಭಾವನೆಯಲ್ಲಿರುವ ಎಂಬ ಕಲ್ಪನೆಯೊಂದಿಗೆ ಕಳೆದ ನಾಲ್ಕು ವರ್ಷಗಳ ಕಾಲ ವಿಷುಕಣಿ ಹಬ್ಬ ಅತ್ಯಂತ ಯಶಸ್ವಿಯಾಗಿ ತಾಲೂಕಿನಲ್ಲಿ ನಡೆಯುತ್ತಾ ಬಂದಿದೆ. ಕೇರಳದ ಸಾಂಪ್ರಾದಾಯಿಕ ವಿಷುಕಣಿ ಸಂಸ್ಕಾರ ಸಂಸ್ಕತಿಯನ್ನು ಪ್ರತಿಬಿಂಬಿಸುವ ಹಬ್ಬ ಇದಾಗಿದ್ದು 5ನೇ ವರ್ಷದ ವಿಷುಕಣಿ ಆಚರಣೆ ಮೇ. 17 ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದ್ದು ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಮೇ. 12ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಒಂದು ತಿಂಗಳಿನಿಂದ ಆಚರಣೆಯ ರೂಪುರೇಷಗಳು ಸಿದ್ಧಗೊಂಡು ಪೂರ್ವ ತಯಾರಿ ನಡೆಸಲಾಗುತ್ತಿದೆ.

ಬೆಳ್ತಂಗಡಿಯಲ್ಲಿ ಧರ್ಮಸ್ಥಳ, ಉಜಿರೆ, ಲಾಯಿಲ ಜಿ.ಪಂ. ವ್ಯಾಪ್ತಿಯಲ್ಲಿ ಅಧಿಕ ಕೇರಳ ಭಾಷಿಗರು ವಾಸವಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಕೇರಳ ಹಾಗೂ ಅಂತಾರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈವಿಧ್ಯ, ಕೇರಳದ ಸಾಂಪ್ರದಾಯಿಕ ಶೈಲಿಯ 32 ಬಗೆಯ ಉಟೋಪಚಾರ ಇರಲಿದೆ. ಈ ಬಾರಿ ಐದನೇ ವರ್ಷದ ಆಚರಣೆ ನಡೆಯುತ್ತಿರುವುದರಿಂದ ಮೂರು ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಶಾಸಕರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಷು ಕಣಿ ಆಚರಣಾ ಸಮಿತಿಯ ಪದಾಧಿಕಾರಿಗಳಾದ ಪ್ರಸಾದ್, ನೈಮಿಷಾ, ಅನಿಲ್ ಕುಮಾರ್ ಹಾಗೂ ದೀವಿನೇಶ್ ಉಪಸ್ಥಿತರಿದ್ದರು.

Related posts

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya
error: Content is protected !!