ಚಾರ್ಮಾಡಿ ಘಾಟ್ನ 10ನೇ ತಿರುವಿನಲ್ಲಿಆಗಾಗ ಒಂಟಿ ಸಲಗವು ರಸ್ತೆ ಮಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು ವಾಹನ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾದ ಘಟನೆ ಮೇ 12ರಂದು ನಡೆದಿದೆ.

ನಿನ್ನೆ ಸಂಜೆ ವೇಳೆಗೆ ಪ್ರಯಾಣೀಕರಿಗೆ ತನ್ನ ದರ್ಶನ ಕಲ್ಪಿಸಿದ ಗಜರಾಜ ಇಂದು ಬೆಳಿಗ್ಗೆ ಮತ್ತೆ ಪ್ರತ್ಯಕ್ಷವಾಗಿದೆ.

ಒಂದೆಡೆ ವಾಹನ ಸವಾರರು ಆತಂಕದಿಂದ ಕಾದು ಕುಳಿತರೆ, ಸ್ಥಳದಲ್ಲಿ ಅಸ್ತವ್ಯಸ್ತ ಸಂಚಾರ ಕಂಡುಬಂತು. ಕಾಡಾನೆ ವಾರದಲ್ಲಿ ನಾಲ್ಕು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ. ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.













