June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

ಬೆಳ್ತಂಗಡಿ: ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿಯ ಮಹಾಸಭೆಯು ಮೇ 8 ರಂದು ಗೌರವಾಧ್ಯಕ್ಷ ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಮಸೀದಿಯ ಖತೀಬ್ ಮುಸ್ತಫಾ ಸಅದಿ, ಜಮಾಅತ್ ಅಧ್ಯಕ್ಷ ಮುಜೀಬ್ ಸಾಹೇಬ್ ಹಾಗೂ ಮುಅಲ್ಲಿಮ್ ನಾಸಿರ್ ಸಅದಿ ಪೆರ್ಡಾಡಿ ಸೇರಿದಂತೆ ಜಮಾತಿನ ಸರ್ವ ಸದಸ್ಯರು ಭಾಗವಹಿಸಿದ್ದರು.
ಸಭೆಯಲ್ಲಿ ಸರ್ವಾನುಮತದಿಂದ ಮುಂದಿನ ಅವಧಿಗೆ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ, ಉಪಾಧ್ಯಕ್ಷರಾಗಿ ಬಿ.ಎನ್. ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಂ. ರಫೀಕ್, ಜೊತೆ ಕಾರ್ಯದರ್ಶಿಯಾಗಿ ಮೊಹಮ್ಮದ್ ಅಲಿ, ಕೋಶಾಧಿಕಾರಿಯಾಗಿ ಪಿ.ಎಚ್. ಹನೀಫ್ ಇವರು ಸರ್ವಾನುಮತದಿಂದ ಆಯ್ಕೆಯಾದರು.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮುಜೀಬ್ ಸಾಹೇಬ್, ಟಿ.ಎಚ್. ಹನೀಫ್ ಮುಸ್ಲಿಯಾರ್, ಪಿ.ಎಚ್. ಹಮೀದ್, ಅಬ್ದುಲ್ ರೆಹಮಾನ್, ಎನ್.ಎಚ್. ಹಂಝ ಮತ್ತು ಕೆ.ಪಿ. ಉಮರಬ್ಬ ಇವರುಗಳನ್ನು ಆರಿಸಲಾಯಿತು.

ಖತೀಬ್ ಮುಸ್ತಫಾ ಸಅದಿ ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಎನ್.ಎಂ. ರಫೀಕ್ ಕಳೆದ ಸಾಲಿನ ವರದಿ ವಾಚಿಸಿದರು. ಜಮಾಅತ್‌ಗೆ ಸಂಬಂಧಪಟ್ಟ ಇತರ ಪ್ರಮುಖ ವಿಚಾರಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಬಿ.ಎನ್. ಹಮೀದ್ ಸ್ವಾಗತಿಸಿದರು.

ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ;
ಮಸ್ಜಿದ್ ಗೌರವಾಧ್ಯಕ್ಷರಾಗಿದ್ದು ಈ ಬಾರಿ ಸಕುಟುಂಬಿಕರಾಗಿ ಪವಿತ್ರ ಹಜ್ ಯಾತ್ರೆಗೆ ತೆರಳಲಿರುವ ಗೌರವಾಧ್ಯಕ್ಷ ಸಯ್ಯಿದ್‌ ಕಾಜೂರು ತಂಙಳ್ ಅವರನ್ನು ಈ ವೇಳೆ ಸನ್ಮಾನಿಸಿ ಬೀಳ್ಕೊಡಲಾಯಿತು. ನಿರ್ಗಮನಾಧ್ಯಕ್ಷ ಮುಜೀಬ್ ಸಾಹೇಬ್ ಅವರ ಸೇವೆಯನ್ನೂ ಗೌರವಿಸಿ ಅಭಿನಂದಿಸಲಾಯಿತು.

Related posts

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya
error: Content is protected !!