May 12, 2026
Uncategorized

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಮಿತ್ತಬಾಗಿಲು, ಮಲವಂತಿಗೆ, ದಿಡುಪೆ, ಅಳದಂಗಡಿ ಮೊದಲಾದ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆ ಸುರಿದಿದೆ.

ಬೆಳ್ತಂಗಡಿ ನಗರ, ವೇಣೂರು, ಉಜಿರೆ, ಲಾಯಿಲ, ಕನ್ಯಾಡಿ, ಶಿರ್ಲಾಲು, ಗುರಿಪಳ್ಳ, ಮುಂಡಾಜೆ, ಕಲ್ಮಂಜ ಮುಂತಾದ ಕಡೆ ಸಾಮಾನ್ಯ ಮಳೆಯಾಗಿದೆ.

ಕೊಲ್ಲಿ-ಕಿಲ್ಲೂರು- ಬಂಗಾಡಿ-ಲಾಯಿಲ ರಸ್ತೆಯಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಮರವು ವಿದ್ಯುತ್ ಲೈನ್ ಮೇಲೆಯೂ ಬಿದ್ದ ಕಾರಣ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು.
ಕಳೆದ ಕೆಲವು ದಿನಗಳಿಂದ ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಮಳೆ ಸುರಿಯದೆ ಭಾರಿ ಸೆಕೆಯ ವಾತವರಣ ನಿರ್ಮಾಣವಾಗಿತ್ತು. ಮಳೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಯಥಾಪ್ರಕಾರ ವಿದ್ಯುತ್ ಹಾಗೂ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡುಬಂದಿದೆ.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya
error: Content is protected !!