June 27, 2026
Uncategorized

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಮಿತ್ತಬಾಗಿಲು, ಮಲವಂತಿಗೆ, ದಿಡುಪೆ, ಅಳದಂಗಡಿ ಮೊದಲಾದ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆ ಸುರಿದಿದೆ.

ಬೆಳ್ತಂಗಡಿ ನಗರ, ವೇಣೂರು, ಉಜಿರೆ, ಲಾಯಿಲ, ಕನ್ಯಾಡಿ, ಶಿರ್ಲಾಲು, ಗುರಿಪಳ್ಳ, ಮುಂಡಾಜೆ, ಕಲ್ಮಂಜ ಮುಂತಾದ ಕಡೆ ಸಾಮಾನ್ಯ ಮಳೆಯಾಗಿದೆ.

ಕೊಲ್ಲಿ-ಕಿಲ್ಲೂರು- ಬಂಗಾಡಿ-ಲಾಯಿಲ ರಸ್ತೆಯಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಮರವು ವಿದ್ಯುತ್ ಲೈನ್ ಮೇಲೆಯೂ ಬಿದ್ದ ಕಾರಣ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು.
ಕಳೆದ ಕೆಲವು ದಿನಗಳಿಂದ ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಮಳೆ ಸುರಿಯದೆ ಭಾರಿ ಸೆಕೆಯ ವಾತವರಣ ನಿರ್ಮಾಣವಾಗಿತ್ತು. ಮಳೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಯಥಾಪ್ರಕಾರ ವಿದ್ಯುತ್ ಹಾಗೂ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡುಬಂದಿದೆ.

Related posts

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!