August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

ಬೆಳ್ತಂಗಡಿ: ರಾಜ್ಯದಲ್ಲಿ 27ಲಕ್ಷ ಕೊಳವೆ ಬಾವಿಗಳಿವೆ. ನಮ್ಮ ಸರಕಾರ ಕಳೆದ ಎರಡು ವರ್ಷದಲ್ಲಿ ಪಕ್ಷತೀತವಾಗಿ ಎಸ್‌ಸಿ ಮತ್ತು ಎಸ್ಟಿ ಸಮುದಾಯಗಳಿಗೆ ೧೩ ಸಾವಿರ ಕೊಳವೆ ಬಾವಿಯನ್ನು ನೀಡಲಾಗಿದೆ.
ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಮತ್ತು ಸುಸ್ಥಿರ ನಿರ್ವಹಣೆಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಂತರ್ಜಲ ಪುನಶ್ಚೇತನಗೊಳಿಸುತ್ತಿದೆ ಹಾಗಾಗಿ ಅಂತರ್ಜಲ ಸಮೃದ್ಧಿ ನಮ್ಮೆಲ್ಲರ ಜವಬ್ಧಾರಿಯಾಗಬೇಕು. ಕಿಂಡಿ ಅಣೆಕಟ್ಟು, ತಡೆಗೋಡೆಗಳ ನಿರ್ಮಾಣಕ್ಕೆ ಸರಕಾರ ಪ್ರಯತ್ನಿಸುವುದಾಗಿ ಎಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವಾರದ ಎನ್.ಎಸ್. ಬೋಸರಾಜು ಹೇಳಿದರು.

ಅವರು ಮೇ.12 ರಂದು ಮಂಗಳವಾರ ಬೆಳ್ತಂಗಡಿ ಪ್ರವಾಸ ಕೈಗೊಂಡಿದ್ದ ವೇಳೆ ಸಂತೆಕಟ್ಟೆಯಲ್ಲಿರುವ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಮಾತನಾಡಿ ರಾಜ್ಯದ ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿದ ನಾಯಕರು ಬೋಸರಾಜುರು. ತಾಲೂಕಿನಲ್ಲಿ ಅಧಿಕ ಮಳೆ ಸುರಿದರು ಬೇಸಿಗೆಯಲ್ಲಿ ಜಲಕ್ಷಾಮದ ಭೀತಿ ಎದುರಾಗುತ್ತದೆ ಹಾಗಾಗಿ ಅಂತರ್ಜಲ ವೃದ್ಧಿಗೆ ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಅಗತ್ಯತೆವಿದೆ. ಅಲ್ಲದೇ ವಿಪರೀತ ಮಳೆಯಿಂದ ನೇರೆ ಭೀತಿ ಉಂಟಾಗುತ್ತದೆ ಹಾಗಾಗಿ ನದಿ ಸಮೀಪವಿರುವ ದೇಗುಲಗಳ ಬಳಿ, ಮಸೀದಿ ಸೇರಿದ್ದಂತೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು ಎಂದು ಸಚಿವರಲ್ಲಿ ಮನವಿ ಸಲ್ಲಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ ಅಝರ್, ಸಹಿತ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ಸ್ವಾಗತಿಸಿ ನಿರೂಪಿಸಿ, ದಯಾನಂದ ಬೆಳಾಲು ವಂದಿಸಿದರು.

ಈ ವೇಳೆ ಸಚಿವರನ್ನು ಸನ್ಮಾನಿಸಲಾಯಿತು. ತಾಲೂಕು ಗ್ರಾಮ, ಬೂತ್ ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಮೊಗ್ರು: ಮುಗೇರಡ್ಕ ವ್ಯಾಪ್ತಿಯಲ್ಲಿ ಅಡಿಕೆ ತೋಟಗಳು ಜಲಾವೃತ

Suddi Udaya
error: Content is protected !!