27.2 C
ಪುತ್ತೂರು, ಬೆಳ್ತಂಗಡಿ
May 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾರದ ಸಂತೆಗೆ ಸ್ಥಳಾವಕಾಶ ಕೊರತೆ: ವ್ಯಾಪಾರಿಗಳು ವಾಪಾಸು

ಬೆಳ್ತಂಗಡಿ: ಬೆಳ್ತಂಗಡಿಯ ಸೋಮವಾರ ಸಂತೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಅಡ್ಡಿಯಾಗಿದ್ದು, ಇದರಿಂದ ವ್ಯಾಪಾರಿಗಳು ಬಾರೀ ಸಮಸ್ಯೆ ಎದುರಿಸುವಂತಾಗಿದೆ. ಕಳೆದ ವಾರ ಬಹಳ ಕಷ್ಟಪಟ್ಟು ವ್ಯಾಪಾರ ನಡೆಸಿದ ಸಂತೆ ವ್ಯಾಪಾರಿಗಳು ಈ ಬಾರೀ ವ್ಯಾಪಾರಕ್ಕೆ ಸ್ಥಳಾವಾಕಾಶ ಇಲ್ಲದೇ ವಾಪಾಸು ತೆರಳುವಂತಾಗಿದೆ.

ಬೆಳ್ತಂಗಡಿಯಲ್ಲಿ ಸಂತೆ ಮಾರುಕಟ್ಟೆ ವ್ಯವಸ್ಥೆ ಸರಿಯಾಗಿ ಇಲ್ಲ. ಇರುವ ಸಂತೆ ಪ್ರಾಂಗಣದಲ್ಲಿ ಏಲಂ ಮೂಲಕ ಪಡೆದು ನಿತ್ಯ ವ್ಯಾಪಾರ ನಡೆಸುವವರು ಇದ್ದಾರೆ. ಉಳಿದಂತೆ ನಾಲ್ಕೈದು ವ್ಯಾಪಾರಿಗಳಿಗಷ್ಟೇ ಅವಕಾಶ ಇದೆ. ಉಳಿದವರು ರಸ್ತೆ ಬದಿ ವ್ಯಾಪಾರ ನಡೆಸುವವರು. ಸದ್ಯ, ಹೆದ್ದಾರಿ ಕಾಮಗಾರಿಗೆ ಎರಡೂ ಬಳಿ ಅಗೆಯಲಾಗಿದ್ದು ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ.
ಕಳೆದ ಸೋಮವಾರವೂ ರಸ್ತೆ ಬದಿ ಸಂತೆ ವ್ಯಾಪಾರದಿಂದ ಸಮಸ್ಯೆ ಉಂಟಾಗಿತ್ತು. ಹೀಗಾಗಿ ಈ ಭಾರಿ ಕಾಮಗಾರಿ ನಡೆಸುವಲ್ಲಿ ಸಂತೆ ವ್ಯಾಪಾರಕ್ಕೆ ಅವಕಾಶ ನೀಡಲಿಲ್ಲ. ವ್ಯಾಪಾರಕ್ಕೆ ಅವಕಾಶ ಇಲ್ಲದೇ ಕೆಲ ವ್ಯಾಪಾರಿಗಳು ಮಾರಿಗುಡಿ ಎದುರಿನ ರಸ್ತೆಯಲ್ಲಿ ವ್ಯಾಪಾರ ನಡೆಸಿದರೆ, ಉಳಿದ 15ಕ್ಕೂ ಹೆಚ್ಚು ವ್ಯಾಪಾರಿಗಳು ಸಂತೆ ವ್ಯಾಪಾರಕ್ಕೆ ಅವಕಾಶ ಇಲ್ಲದೇ ವಾಪಾಸು ತೆರಳಿದ್ದಾರೆ.

ಬೆಳ್ತಂಗಡಿ, ದೊಡ್ಡ ನಗರವಾದರೂ ಸಂತೆ ವ್ಯಾಪಾರಕ್ಕೆ ಸುಸರ್ಜಿತ ಮಾರುಕಟ್ಟೆ ಇರದೇ ಇರುವುದು ವಿಪರ್ಯಾಸ. ಸಂತೆ ವ್ಯಾಪಾರದ ಸುಂಕ ತೆಗೆದುಕೊಳ್ಳಲು ಬರುತ್ತಾರೆ ಆದರೆ ಸರಿಯಾದ ವ್ಯವಸ್ಥೆ ಮಾಡುವುದಿಲ್ಲ. ನಮ್ಮ ಪರಿಸ್ಥಿತಿ ಯಾರಿಗೂ ಬೇಡವಾಗಿದೆ. ಶಾಸಕರು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ವ್ಯಾಪಾರಿಗಳು ಬೇಸರ ತೋಡಿಕೊಂಡಿದ್ದಾರೆ.

Related posts

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya
error: Content is protected !!