August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

ಉಜಿರೆ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ NABH ಪುರಸ್ಕೃತ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಮೇ 12 ರಂದು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನು ಜಗತ್ತು ಕಂಡ ಅಪ್ರತಿಮ ದಾದಿ ಫ್ಲೋರೆನ್ಸ್ ನೈಟಿಂಗೇಲ್ ಸ್ಮರಣಾರ್ಥ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ ಮಾತನಾಡುತ್ತ ದಾದಿಯರ ಸೇವೆ ದೇವರ ಪೂಜೆಗೆ ಸಮಾನ , ದಾದಿಯರು ನಮ್ಮ ಆಸ್ಪತ್ರೆಯ ಆಧಾರ ಸ್ತಂಭಗಳು , ಅವರ ಸೇವೆಗೆ ಬೆಲೆ ಕಟ್ಟುವುದು ಅಸಾದ್ಯ . ನಾವು ವೈದ್ಯರು ರೋಗಿಗಳಿಗೆ ಔಷಧಿ ಮತ್ತು ಶುಶ್ರೂಷೆಯ ಬಗ್ಗೆ ಸಲಹೆ ಸೂಚನೆ ಕೊಡಬಹುದು ಅದನ್ನು ಅನುಷ್ಠಾನಕ್ಕೆ ತರುವ ಜವಾಬ್ದಾರಿ ದಾದಿಯರದ್ದು , ಅಂತಹ ದಾದಿಯರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಹಾರೈಸಿದರು.

ಪ್ರಾರಂಭದಲ್ಲಿ ಎಲ್ಲ ದಾದಿಯರಿಗೆ ಸಿಸ್ಟೆರ್ ಲಿನ್ಸಿ ಯವರು ಜ್ಯೋತಿಯನ್ನು ಹಸ್ತಾಂತರಿಸಿ ಕರ್ತವ್ಯದ ಪ್ರತಿಜ್ಞಾ ವಿಧಿ ಬೋಧಿಸಿದರು. ಆಸ್ಪತ್ರೆಯ ಸಹಾಯಕ ನರ್ಸಿಂಗ್ ಸುಪರಿಂಟೆಂಡೆಂಟ್ ವಸಂತ ಕುಮಾರಿಯವರು ಈ ದಿನದ ಮಹತ್ವ ಮತ್ತು ಆಚರಣೆಯ ಉದ್ದೇಶಗಳನ್ನು ಕುರಿತು ಮಾಹಿತಿ ನೀಡಿದರು. ಪ್ರಧಾನ ವ್ಯವಸ್ಥಾಪಕ ದೇವಸ್ಯ ವರ್ಗೀಸ್ ದಾದಿಯರು ಅನುಸರಿಸಬೇಕಾದ ಕರ್ತವ್ಯ ಮತ್ತು ರೋಗಿಗಳ ಸೇವೆಯಲ್ಲಿ ಅವರ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನಾಡಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಹಿರಿಯ ದಾದಿಯರಾದ ಉಷಾ ಗೌಡ , ನಳಿನಾಕ್ಷಿ ಮತ್ತು ಕೇಶವತಿ ಅವರನ್ನು ಡಾ.ಗೋಪಾಲಕೃಷ್ಣ ಮತ್ತು ಡಾ.ಭಾರತಿ ದಂಪತಿಗಳಿಂದ ಹಾರಾರ್ಪಣೆ ಮತ್ತು ಶಾಲು ಹೊದಿಸಿ , ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಭಾರತಿ ಜಿ.ಕೆ , ಡಾ. ಆದಿತ್ಯ ರಾವ್ , ಡಾ. ಅಂಕಿತ ಜಿ ಭಟ್ , ಡಾ. ಶ್ರೇಯಸ್ ಮುಂತಾದವರು ಉಪಸ್ಥಿತರಿದ್ದರು. ಸಿಸ್ಟೆರ್ ಮಿಥ್ಯಶ್ರೀ ಧನ್ಯವಾದ ಸಮರ್ಪಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya
error: Content is protected !!