August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ತಣ್ಣೀರುಪಂಥ: ಗ್ರಾಮ ಪಂಚಾಯತ್ ತಣ್ಣೀರುಪಂಥ ಅರಿವು ಕೇಂದ್ರ ಗ್ರಂಥಾಲಯ ತಣ್ಣೀರುಪಂತ ಇಲ್ಲಿ,”ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ” ಸರಕಾರದ ಆದೇಶದಂತೆ ಮೇ 04 ರಿಂದ ಮೇ11 ವರೆಗೆ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ 12 ರಂದು ನಡೆಯಿತು.

ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮ್ಮಯ್ಯ ಜೆ.ಹೆಚ್ , ಕಾರ್ಯದರ್ಶಿ ಆನಂದ್, ಸಂಪನ್ಮೂಲ ವ್ಯಕ್ತಿಯಾಗಿ ಪ್ರವೀಣ್ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗ ಪಾಲ್ಗೊಂಡರು.

ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನೆ ಹೇಳಿ ಶಿಬಿರದ ಪ್ರಯೋಜನವನ್ನು ಮಕ್ಕಳಿಗೆ ತಿಳಿಸಿ ನಿಮ್ಮ ಮುಂದಿನ ಜೀವನದಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಲು ಈ ಶಿಬಿರವು ನಿಮಗೆ ಮಾರ್ಗದರ್ಶನವಾಗಲಿ ಎಂದು ಶುಭ ಹಾರೈಸಿದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ತಮ್ಮ ತಮ್ಮ ಪ್ರತಿಭೆಯನ್ನು ಹಾಡು ನಾಟಕ ನೃತ್ಯದ ಮೂಲಕ ವ್ಯಕ್ತಪಡಿಸಿದರು.
ಶಿಬಿರದಲ್ಲಿ ಭಾಗವಹಿಸಿದ 25 ಮಕ್ಕಳಿಗೆ ಪ್ರಮಾಣ ಪತ್ರ, ಪೆನ್ನು, ಪುಸ್ತಕ, ರಬ್ಬರ್, ಪೆನ್ಸಿಲ್, ಕಂಪಾಸ್ ಬಾಕ್ಸ್ ನೀಡಿ ಅಭಿನಂದಿಸಲಾಯಿತು . ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ನೇತ್ರಾವತಿ ಹೋಟೆಲ್ ಮಾಲೀಕರು ಹಣ್ಣು ಹಂಪಲು ನೀಡಿದರು.

Related posts

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya

ಉಜಿರೆ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ “ಶುಭ-ಗೋಲ್ಡ್” ಸ್ಕೀಮ್ ಪ್ರಾರಂಭ: ಸಂಸ್ಥೆಯ ನೂತನ ರಾಯಭಾರಿ ಚಲನಚಿತ್ರ ನಟಿ ಸಿಂಚನ ಪಿ ರಾವ್ ರಿಂದ ಪೋಸ್ಟರ್ ಅನಾವರಣ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya
error: Content is protected !!