27.9 C
ಪುತ್ತೂರು, ಬೆಳ್ತಂಗಡಿ
May 13, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

ದಿನಾಂಕ: ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ (ರಿ) ಬೆಳ್ತಂಗಡಿ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಮಧುರರವರ ಅಧ್ಯಕ್ಷತೆಯಲ್ಲಿ ಮೇ 12ರಂದು ಆಯೋಜಿಸಲಾಯಿತು.

ಸುದರ್ಶನಿ ಸ್ವಾಗತಿಸಿ ವಿನುತಾ ರಜತ್ ಹಾಗೂ ರೂಪ ಪ್ರಭು ಪ್ರಾರ್ಥನೆ ಹಾಡುವುದರೊಂದಿಗೆ ಸಂಜೀವಿನಿ ಒಕ್ಕೂಟದ ಧ್ಯೇಯ ಗೀತೆಯೊಂದಿಗೆ ಮಹಾಸಭೆ ಸಭೆಯ ಪ್ರಾರಂಭವಾಯಿತು. ನೇತ್ರಾವತಿ ಒಕ್ಕೂಟದ ಕಾರ್ಯದರ್ಶಿ ಗಿರಿಜಾ ಒಕ್ಕೂಟದ ವಾರ್ಷಿಕ ವರದಿ ಹಾಗೂ ಲೆಕ್ಕ ಪರಿಶೋಧನಾ ವರದಿಯನ್ನು ವಾಚಿಸಿ ಸಭೆಯಿಂದ ಅನುಮೋದನೆ ಪಡೆದುಕೊಳ್ಳಲಾಯಿತು.

ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯ ಮುಂಚಿತವಾಗಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ತಾಲೂಕು ಮಟ್ಟದ ಒಕ್ಕೂಟದ ನಿಯಮ & ನಿಭಂದನೆಗಳನ್ನು ಸಭೆಯಲ್ಲಿ ಮಂಡಿಸಿದರು. ನಂತರ ಆಯ್ಕೆ ಪ್ರಕ್ಯಿಯೆಯ ಮುಖಾಂತರ ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ನೂತನ ಅಧ್ಯಕ್ಷರನ್ನಾಗಿ ಧನಲಕ್ಷ್ಮೀ ಜನಾರ್ಧನ್ ಇವರನ್ನು ಕಾರ್ಯದರ್ಶಿಯಾಗಿ ವಿನುತಾ ರಜತ್ ಗೌಡ, ಕೋಶಾಧಿಕಾರಿಯಾಗಿ ಸುದರ್ಶನಿ, ಉಪಾಧ್ಯಕ್ಷರಾಗಿ ಲಿಲ್ಲಿ ವೇಗಸ್, ಸಹ ಕಾರ್ಯದರ್ಶಿಯಾಗಿ ರೂಪ ಪ್ರಭು ಇವರನ್ನು ಸರ್ಮಾನುಮತದಿಂದ ಆಯ್ಕೆ ಮಾಡಲಾಯಿತು.

ನಂತರದಲ್ಲಿ ಅಧಿಕಾರ ಹಸ್ತಾಂತರ ನಡೆಸಿ ಸಭೆ ಅಧ್ಯಕ್ಷರು ಹಾಗೂ ನೂತನ ಅಧ್ಯಕ್ಷರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ತಾಲೂಕು ಒಕ್ಕೂಟದ ಕೋಶಾಧಿಕಾರಿ ಬಂದ ಎಲ್ಲರಿಗೂ ಧನ್ಯವಾದ ಸಮರ್ಪಿಸುವ ಮೂಲಕ ಮಹಾಸಭೆಯು ಸಮಾಪ್ತಿಗೊಂಡಿತು. ಕಾರ್ಯಕ್ರಮದಲ್ಲಿ 48 ಗ್ರಾಮ ಮಟ್ಟದ ಒಕ್ಕೂಟಗಳಿಂದ ಅಧ್ಯಕ್ಷರು/ಕಾರ್ಯದರ್ಶಿಗಳು, ತಾಲೂಕು ಅಭಿಯಾನ ನಿರ್ವಹಣಾ ಘಟಕದ ತಾಲೂಕು ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರು, MIS, BRP-PRI ಉಪಸ್ಥಿತರಿದ್ದರು.

Related posts

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya
error: Content is protected !!