ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಕೌಶಲ್ಯವನ್ನು ಬೆಳೆಸುವ ದೃಷ್ಟಿಯಿಂದ ಹಳ್ಳಿ ಸಂತೆ ಎಂಬ ಕಾರ್ಯಕ್ರಮದ ಮೂಲಕ ಹೋಟೆಲ್ ವ್ಯವಹಾರ ಮತ್ತು ಅಂಗಡಿ ವ್ಯವಹಾರಗಳ ಜ್ಞಾನವನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಸಂಘದ ಸಂಯೋಜಕರಾದ ಪ್ರೊ| ನವೀನ್ ಹಾಗೂ ಡಾ. ರಾಜೇಶ್ವರಿ ಮತ್ತು ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್ ಉಪಸ್ಥಿತರಿದ್ದರು.
ಕು| ಕವನ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು. ಕು| ತೇಜಸ್ವಿನಿ ವಂದಿಸಿದರು.













