24.1 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 14: ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ” ಶಾಖೆ” ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ “ಮುದ್ದಿಗೆ ಶಾಖೆ”ಯ ಉದ್ಘಾಟನಾ ಸಮಾರಂಭವು ಮೇ 14 ರಂದು ಬೆಳಿಗ್ಗೆ 10ಕ್ಕೆ ಹತ್ಯಡ್ಕ ಮುದ್ದಿಗೆ ದಿವಾಕರ ತಾಮ್ಹನ್ ಕಾರ್‌ರವರ ಕಟ್ಟಡದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದ. ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್.ಎಸ್., ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ಅಧ್ಯಕ್ಷರಾದ ಶ್ರೀಕರ ಭಿಡೆ, ಎಂ. ಕೇಶವ ರಾವ್ , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ನಿರ್ದೇಶಕರು ಹೆಚ್. ಸುಂದರ ತುಂಬೆತಡ್ಕ, ಸೂರಪ್ಪ ರಾಣೆಯಾರ್ ಸಂಗಮನಗರ ಮುದ್ದಿಗೆ , ಬಾಲಕೃಷ್ಣ ರೈ ಕೃಷಿಕರು, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಾಮನ ತಾಮ್ಹನ್‌ಕಾರ್, ದಿವಾಕರ ತಾಮ್ಹನ್‌ಕಾರ್ ಕಟ್ಟಡ ಮಾಲಕರು, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್ ನಿ. ಹಾಗೂ ನಿರ್ದೇಶಕರು, ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.

Related posts

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya
error: Content is protected !!