25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

ಬೆಳ್ತಂಗಡಿ : ‘ಬ್ರಹ್ಮ ಶ್ರೀ ನಾರಾಯಣ ಗುರುಗಳು ಹಿಂದುಳಿದ ಸಮಾಜಕ್ಕೆ ಬದುಕು ನೀಡಿದವರು. ಅವರ ವಿಚಾರಗಳಿಗೆ ಹಾನಿಯಾಗುವ ಯಾವುದೇ ಕೃತ್ಯ ಸಮಾಜದಲ್ಲಿ ನಡೆದರೂ ಒಗ್ಗಟ್ಟಾಗಿ ಪ್ರತಿಭಟಿಸುವ, ಆ ಮೂಲಕ ನ್ಯಾಯ ಒದಗಿಸುವ ಕೆಲಸವನ್ನು ಬಿಲ್ಲವರಾದಿಯಾಗಿ ಸಮಸ್ತ ಹಿಂದುಳಿದ ಸಮಾಜ ಮಾಡಬೇಕಾಗಿದೆ’ ಎಂದು ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು ಹೇಳಿದರು.

ಅವರು ಮೇ 12ರಂದು ಲಾಯಿಲ ಪಡ್ಲಾಡಿ ಅಜೆಕಲ್ ಶ್ರೀ ಜಯ ದುರ್ಗಾ ಕೃಪಾ ನಿವಾಸದ ಆವರಣದಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಲಾಯಿಲ ಇದರ ನೇತೃತ್ವದಲ್ಲಿ ಯುವ ಬಿಲ್ಲವ ವೇದಿಕೆ ಹಾಗೂ ಮಹಿಳಾ ಬಿಲ್ಲವ ವೇದಿಕೆ ಲಾಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಜಯಂತಿಯ ಪ್ರಯುಕ್ತ ನಡೆದ ಗುರುಪೂಜೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದರು.

‘ ಧಾರ್ಮಿಕವಾಗಿ, ಶೈಕ್ಷಣಿಕವಾಗಿ ನಾರಾಯಣ ಗುರುಗಳು ಮೂಡಿಸಿದ ಅರಿವು ಸಮಾಜದಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಡಿದೆ. ಸಮಾಜ ಪರಿವರ್ತನೆಯ ಹರಿಕಾರರಾಗಿ ಅವರು ಮಾಡಿದ ಕಾರ್ಯಗಳು ನಮ್ಮ ಬದುಕಿನುದ್ದಕ್ಕೂ ಮಾರ್ಗದರ್ಶಕವಾಗಿದೆ. ನಾರಾಯಣ ಗುರುಗಳ ಹೆಸರಿನಲ್ಲಿ ಕಾಣಿಸಿಕೊಂಡ ಪ್ರತಿ ಸಂಘಗಳು ಸಂಘಟನೆಯ ಜತೆ ಸಕರಾತ್ಮಕ ಚಿಂತನೆ ಬೆಳೆಸಿಕೊಂಡು ಸಮಾಜವನ್ನು ಬೆಳೆಸುವ ಕಾರ್ಯವನ್ನು ಮಾಡುವಂತಾಗಬೇಕು’ ಎಂದರು.

ಸಂಘದ ಅಧ್ಯಕ್ಷ ಬಿ. ಲಕ್ಷ್ಮಣ ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಬಿಲ್ಲವ ಸಮಾಜ ಸೇರಿದಂತೆ ತಳ ಸಮುದಾಯದ ಪಾಲಿಗೆ ಆರಾಧ್ಯ ಶಕ್ತಿ ನಾರಾಯಣ ಗುರುಗಳು. ಲಾಯಿಲದಲ್ಲಿ ಬಿಲ್ಲವ ಸಮಾಜದ ಸೀಮಿತ ಮನೆಗಳಿದ್ದರೂ ಆ ಮನೆಯವರು ಒಟ್ಟು ಸೇರಿಕೊಂಡು ಸಮಾಜವನ್ನು ಒಂದಾಗಿಸುವ ಕಾರ್ಯವನ್ನು ಮಾಡುತ್ತ ಬರುತ್ತಿದ್ದು, ಇದಕ್ಕೆ ಶಕ್ತಿ ತುಂಬುವ ಕೆಲಸವನ್ನು ಎಲ್ಲರೂ ಮಾಡಬೇಕು’ ಎಂದರು.

ಸಂಘದ ಗೌರವಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಆನಂದ ಪೂಜಾರಿ ನಿನ್ನಿಕಲ್ಲು, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಚಂದ್ರಶೇಖರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಅಶೋಕ್ ಕುಮಾರ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರೇಖಾ, ಸಂಘದ ನಿಯೋಜಿತ ಅಧ್ಯಕ್ಷ ಶೈಲೇಶ್ ಆರ್. ಜೆ., ನಿಯೋಜಿತ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರವಿಚಂದ್ರ ನಾಡೆಂಜ ಹಾಗೂ ನಿಯೋಜಿತ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಜಯಂತಿ ಅನ್ನಡ್ಕ ಇದ್ದರು.

ಸಂಘದ ಕೋಶಾಧಿಕಾರಿ ಭೋಜರಾಜ್ ಪೆಳತ್ತಡಿ, ಕಾರ್ಯದರ್ಶಿ ಸೌಮ್ಯ ಲಾಯಿಲ, ನಿಯೋಜಿತ ಕಾರ್ಯದರ್ಶಿ ಜಯಂತಿ ಸೇರಿದಂತೆ ಸಂಘದ ಪದಾಧಿಕಾರಿಗಳು ಸಹಕರಿಸಿದರು.

ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ನಿಯೋಜಿತ ನಿರ್ದೇಶಕಿ ಗೀತಾ ಪಡ್ಲಾಡಿ ವಂದಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya
error: Content is protected !!