August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

ಉಜಿರೆ : ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಆಯೋಜಿಸಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಮಂಗಳೂರು ವಿಭಾಗದ ಅಂತರ್ ಕಾಲೇಜುಗಳ ಕ್ರಿಕೆಟ್ ಪಂದ್ಯಾಟವು ನಿಟ್ಟೆಯಲ್ಲಿ ಜರಗಿತು. ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪುರುಷರ ಕ್ರಿಕೆಟ್ ತಂಡವು ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಸೆಮಿಫೈನಲ್ ಹಂತದ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ತಂಡವು ಜಿಲ್ಲೆಯ ಕೆನರಾ ಇಂಜಿನಿಯರಿಂಗ್ ಕಾಲೇಜ್ ತಂಡದ ವಿರುದ್ಧ ರೋಚಕ (99/10 – 101/9 ) 1 ವಿಕೆಟ್ ಜಯ ಸಾಧಿಸಿ ಫೈನಲ್ ಪ್ರವೇಶ ಪಡೆಯಿತು. ಬಳಿಕ ಫೈನಲ್ ಹಂತದ ಪಂದ್ಯದಲ್ಲಿ ಸಾಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ತಂಡದ ವಿರುದ್ಧ ಸೆಣಸಾಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಈ ಮೂಲಕ ಶಿವಮೊಗ್ಗದಲ್ಲಿ ನಡೆಯಲಿರುವ ವಿಟಿಯು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ತಂಡವು ಆಯ್ಕೆಗೊಂಡಿದೆ. ಟೂರ್ನಮೆಂಟ್‌ನ ಅತ್ಯುತ್ತಮ ಬೌಲರ್ ಪ್ರಶಸ್ತಿಯನ್ನು ಎಸ್.ಡಿ.ಎಂ ತಂಡದ ಗೌತಮ್ ಆರ್. ಎಂ. ಪಡೆದುಕೊಂಡರು. ತಂಡಕ್ಕೆ ಉಜಿರೆಯ ತಾಂತ್ರಿಕ ಮಹಾವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ತರಬೇತಿಯನ್ನು ನೀಡಿರುತ್ತಾರೆ.

ಪ್ರಶಸ್ತಿ ವಿಜೇತ ತಂಡದಲ್ಲಿ ವಿದ್ಯಾರ್ಥಿಗಳಾದ ಅಯಾನ್ ಖಾನ್ (ನಾಯಕ), ಸಾಹಿಲ್ ಬೋವಿ, ಅಭಯಚಂದ್ರ, ಆರ್ಯನ್ , ಶ್ರೀರಾಮ್ , ಪ್ರಜ್ವಲ್ , ಆಕಾಶ್ , ಶ್ರೇಯಸ್, ಗೌತಮ್ , ಬಸವರಾಜ್ , ಶಿಶಿರ್ , ತ್ರೈಲೋಕ್ಯಾ , ವಿವೇಕ್, ಸಾತ್ವಿಕ್ ಮತ್ತು ವಿಕ್ರಮ್ ಭಾಗವಹಿಸಿರುತ್ತಾರೆ.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಸೋಣಂದೂರು: ಪಣಕಜೆ ಸಮೀಪ ಆಟೋ ರಿಕ್ಷಾ ಪಲ್ಟಿ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya
error: Content is protected !!