ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಅಧ್ಯಯನ, ಒಬ್ಬಂಟಿ ತಾಯಂದಿರ ಮನೋ ಸಾಮಾಜಿಕ ಸ್ಥಿತಿಗತಿ ಬಗ್ಗೆ ಪ್ರೊಫೆಸರ್ ರವೀಂದ್ರ ಗಡ್ಕರ್ ಅವರ ಮಾರ್ಗದರ್ಶನದಲ್ಲಿ ಸ್ವಾತಿ ಬಿ ಅವರು ಮಂಡಿಸಿದ ವಿಶೇಷ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಪಿ.ಹೆಚ್.ಡಿ ಅವಾರ್ಡ್ ನೀಡಿ ಗೌರವಿಸಿದೆ.

ಕಳೆದ ಹಲವು ವರ್ಷಗಳಿಂದ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗುರುವಾಯನಕೆರೆ ಅಭಯ ಆಗ್ರೋ ಸಪ್ಲೈಸ್ ನ ಸಹಮಾಲೀಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.













