August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ತಣ್ಣೀರುಪಂಥ: ಗ್ರಾಮ ಪಂಚಾಯತ್ ತಣ್ಣೀರುಪಂಥ ಅರಿವು ಕೇಂದ್ರ ಗ್ರಂಥಾಲಯ ತಣ್ಣೀರುಪಂತ ಇಲ್ಲಿ,”ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ” ಸರಕಾರದ ಆದೇಶದಂತೆ ಮೇ 04 ರಿಂದ ಮೇ11 ವರೆಗೆ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ 12 ರಂದು ನಡೆಯಿತು.

ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮ್ಮಯ್ಯ ಜೆ.ಹೆಚ್ , ಕಾರ್ಯದರ್ಶಿ ಆನಂದ್, ಸಂಪನ್ಮೂಲ ವ್ಯಕ್ತಿಯಾಗಿ ಪ್ರವೀಣ್ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗ ಪಾಲ್ಗೊಂಡರು.

ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನೆ ಹೇಳಿ ಶಿಬಿರದ ಪ್ರಯೋಜನವನ್ನು ಮಕ್ಕಳಿಗೆ ತಿಳಿಸಿ ನಿಮ್ಮ ಮುಂದಿನ ಜೀವನದಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಲು ಈ ಶಿಬಿರವು ನಿಮಗೆ ಮಾರ್ಗದರ್ಶನವಾಗಲಿ ಎಂದು ಶುಭ ಹಾರೈಸಿದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ತಮ್ಮ ತಮ್ಮ ಪ್ರತಿಭೆಯನ್ನು ಹಾಡು ನಾಟಕ ನೃತ್ಯದ ಮೂಲಕ ವ್ಯಕ್ತಪಡಿಸಿದರು.
ಶಿಬಿರದಲ್ಲಿ ಭಾಗವಹಿಸಿದ 25 ಮಕ್ಕಳಿಗೆ ಪ್ರಮಾಣ ಪತ್ರ, ಪೆನ್ನು, ಪುಸ್ತಕ, ರಬ್ಬರ್, ಪೆನ್ಸಿಲ್, ಕಂಪಾಸ್ ಬಾಕ್ಸ್ ನೀಡಿ ಅಭಿನಂದಿಸಲಾಯಿತು . ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ನೇತ್ರಾವತಿ ಹೋಟೆಲ್ ಮಾಲೀಕರು ಹಣ್ಣು ಹಂಪಲು ನೀಡಿದರು.

Related posts

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya
error: Content is protected !!