32.9 C
ಪುತ್ತೂರು, ಬೆಳ್ತಂಗಡಿ
May 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ತಣ್ಣೀರುಪಂಥ: ಗ್ರಾಮ ಪಂಚಾಯತ್ ತಣ್ಣೀರುಪಂಥ ಅರಿವು ಕೇಂದ್ರ ಗ್ರಂಥಾಲಯ ತಣ್ಣೀರುಪಂತ ಇಲ್ಲಿ,”ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ” ಸರಕಾರದ ಆದೇಶದಂತೆ ಮೇ 04 ರಿಂದ ಮೇ11 ವರೆಗೆ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ 12 ರಂದು ನಡೆಯಿತು.

ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮ್ಮಯ್ಯ ಜೆ.ಹೆಚ್ , ಕಾರ್ಯದರ್ಶಿ ಆನಂದ್, ಸಂಪನ್ಮೂಲ ವ್ಯಕ್ತಿಯಾಗಿ ಪ್ರವೀಣ್ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗ ಪಾಲ್ಗೊಂಡರು.

ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನೆ ಹೇಳಿ ಶಿಬಿರದ ಪ್ರಯೋಜನವನ್ನು ಮಕ್ಕಳಿಗೆ ತಿಳಿಸಿ ನಿಮ್ಮ ಮುಂದಿನ ಜೀವನದಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಲು ಈ ಶಿಬಿರವು ನಿಮಗೆ ಮಾರ್ಗದರ್ಶನವಾಗಲಿ ಎಂದು ಶುಭ ಹಾರೈಸಿದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ತಮ್ಮ ತಮ್ಮ ಪ್ರತಿಭೆಯನ್ನು ಹಾಡು ನಾಟಕ ನೃತ್ಯದ ಮೂಲಕ ವ್ಯಕ್ತಪಡಿಸಿದರು.
ಶಿಬಿರದಲ್ಲಿ ಭಾಗವಹಿಸಿದ 25 ಮಕ್ಕಳಿಗೆ ಪ್ರಮಾಣ ಪತ್ರ, ಪೆನ್ನು, ಪುಸ್ತಕ, ರಬ್ಬರ್, ಪೆನ್ಸಿಲ್, ಕಂಪಾಸ್ ಬಾಕ್ಸ್ ನೀಡಿ ಅಭಿನಂದಿಸಲಾಯಿತು . ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ನೇತ್ರಾವತಿ ಹೋಟೆಲ್ ಮಾಲೀಕರು ಹಣ್ಣು ಹಂಪಲು ನೀಡಿದರು.

Related posts

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!