25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್- ರೆಂಜರ್ಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವುಗಳ ಜೊತೆಗೆ ಮಂಗಳೂರಿನ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ ಭಾರತಿ ಮತ್ತು ಕೇಶವ ಸ್ಮೃತಿ ಸಂವರ್ಧನ ಸಮಿತಿ ಇವುಗಳ ಸಂಯುಕ್ತ ಆಶಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಮೂಲತಃ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಡಿ ಎಡಿಕ್ಷನ್ ಕೌನ್ಸಿಲರ್ ಡಾ. ಕುಸುಮ್ ತಂತ್ರಿ ಭಾಗವಹಿಸಿ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವುದರಿಂದ ಆಗುವ ಪರಿಣಾಮಗಳು ಮತ್ತು ಇಂದಿನ ಯುವಜನತೆ ತಮಗೆ ಗೊತ್ತಿಲ್ಲದೆ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ ಎಂಬುದನ್ನು ಅನೇಕ ನೈಜ ಘಟನೆಗಳ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾದಕ ವ್ಯಸನ ಬಾಧೀತರಾಗಿ ಅದರಿಂದ ವಿಮುಖರಾಗಿ ಉತ್ತಮ ಪ್ರಜೆಗಳಾಗಿರುವ ವ್ಯಕ್ತಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ರವಿ ಎಂ ಎನ್ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ| ಕವಿತಾ ಉಪಸ್ಥಿತರಿದ್ದರು. ಕು| ಚಿತ್ರ ಕಾರ್ಯಕ್ರಮ ನಿರೂಪಿಸಿ, ಕುಮಾರಿ ಸುರಕ್ಷಿತ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!