August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್- ರೆಂಜರ್ಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವುಗಳ ಜೊತೆಗೆ ಮಂಗಳೂರಿನ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ ಭಾರತಿ ಮತ್ತು ಕೇಶವ ಸ್ಮೃತಿ ಸಂವರ್ಧನ ಸಮಿತಿ ಇವುಗಳ ಸಂಯುಕ್ತ ಆಶಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಮೂಲತಃ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಡಿ ಎಡಿಕ್ಷನ್ ಕೌನ್ಸಿಲರ್ ಡಾ. ಕುಸುಮ್ ತಂತ್ರಿ ಭಾಗವಹಿಸಿ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವುದರಿಂದ ಆಗುವ ಪರಿಣಾಮಗಳು ಮತ್ತು ಇಂದಿನ ಯುವಜನತೆ ತಮಗೆ ಗೊತ್ತಿಲ್ಲದೆ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ ಎಂಬುದನ್ನು ಅನೇಕ ನೈಜ ಘಟನೆಗಳ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾದಕ ವ್ಯಸನ ಬಾಧೀತರಾಗಿ ಅದರಿಂದ ವಿಮುಖರಾಗಿ ಉತ್ತಮ ಪ್ರಜೆಗಳಾಗಿರುವ ವ್ಯಕ್ತಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ರವಿ ಎಂ ಎನ್ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ| ಕವಿತಾ ಉಪಸ್ಥಿತರಿದ್ದರು. ಕು| ಚಿತ್ರ ಕಾರ್ಯಕ್ರಮ ನಿರೂಪಿಸಿ, ಕುಮಾರಿ ಸುರಕ್ಷಿತ ವಂದಿಸಿದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya
error: Content is protected !!