August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

ಉಜಿರೆ,ದಿ.ಮೇ.13 : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ್ ಕಾಲೇಜುಗಳ ವಲಯ ಮತ್ತು ರಾಜ್ಯ ಮಟ್ಟದ ಪುರುಷರ ಕಬ್ಬಡ್ಡಿ ಪಂದ್ಯಾವಳಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣದಲ್ಲಿ ಆಯೋಜಿಸಲಾಗಿದೆ.

ಮೇ 15ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಲಯದ ಅಂತರ್ ಕಾಲೇಜುಗಳ ಪಂದ್ಯಾಟ ಗಳು ನಡೆಯಲಿವೆ. ಈ ದಿನ ವಲಯದ ಸುಮಾರು 14 ಅಂತರ್ ಕಾಲೇಜುಗಳ ತಂಡವು ಸ್ಪರ್ಧಿಸಲಿದೆ. ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿ, ಪ್ರೊ ಕಬ್ಬಡ್ಡಿ ಖ್ಯಾತಿಯ ರಾಷ್ಟ್ರೀಯ ಕಬಡ್ಡಿ ಆಟಗಾರ ಗಗನ್ ಗೌಡ ಪಾಲ್ಗೋಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ವಹಿಸಲಿದ್ದಾರೆ.

ಮೇ 18,19 ರಂದು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ :

ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇದೇ ಇಂದ್ರಪ್ರಸ್ಥ ಸಭಾಂಗಣದಲ್ಲಿ ಮೇ 18 ಮತ್ತು 19 ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ್ ವಲಯಗಳ ರಾಜ್ಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಗಳು ನಡೆಯಲಿವೆ. ಈ ದಿನ ರಾಜ್ಯದ ಬೆಂಗಳೂರು, ಬೆಳಗಾವಿ, ಕಲಬುರ್ಗಿ,ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 16 ತಂಡಗಳು ಸೆಣಸಾಡಲಿವೆ.

ಈ ದಿನದ ಪಂದ್ಯಾವಳಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರರಾದ ರವೀಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗೌರವ ಉಪಸ್ಥಿತಿಯಲ್ಲಿ ಬೆಳ್ತಂಗಡಿ ವಿಭಾಗದ ಡೆಪ್ಯುಟಿ ರೇಂಜ್ ಅರಣ್ಯ ಅಧಿಕಾರಿ ರಂಜಿತ್ ಕುಮಾರ್ ಎಸ್ ಭಾಗಿಯಾಗಲಿದ್ದಾರೆ. ಈ ದಿನದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಹಿಸಲಿದ್ದಾರೆ.

ಎಂದು ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ್ ಉಪಸ್ಥಿತರಿದ್ದರು.

Related posts

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya
error: Content is protected !!