24.1 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

ಬೆಳ್ತಂಗಡಿ: ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಶ್ರಮದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಾನಂದ ಸ್ವಾಮಿ ಮಾತನಾಡಿ, ದಾದಿಯರ ಸೇವೆಯ ಮಹತ್ವವನ್ನು ವಿವರಿಸಿದರು.

ದಾದಿಯರು ಸಮಾಜದ ಆರೋಗ್ಯ ವ್ಯವಸ್ಥೆಯ ನಿಜವಾದ ಆಧಾರಸ್ತಂಭಗಳಾಗಿದ್ದು, ಅನಾರೋಗ್ಯ ಪೀಡಿತರ ಹಾಗೂ ಅಗತ್ಯವಿರುವವರ ಸೇವೆಯಲ್ಲಿ ಅಪಾರ ಸಹನೆ, ಪ್ರೀತಿ ಮತ್ತು ತ್ಯಾಗ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. “ದಾದಿಯರ ಸೇವೆ ಮಾನವೀಯತೆಯ ಪ್ರತಿರೂಪವಾಗಿದ್ದು, ಅವರ ಸೇವೆ ದೇವರ ಸೇವೆಗೆ ಸಮಾನ” ಎಂದು ಅವರು ಅಭಿಪ್ರಾಯಪಟ್ಟರು. ಅವರ ನಿರಂತರ ಸೇವೆ ಹಾಗೂ ಕಾಳಜಿಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಸಿಬ್ಬಂದಿ ದಾದಿಯರನ್ನು ಸನ್ಮಾನಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಬಳಿಕ ಕೇಕ್ ಕತ್ತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಶ್ರಮದ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ, ಮಂಗಳೂರು ನರ್ಸಿಂಗ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶ್ರಮದ ನಿವಾಸಿಗಳು ಉಪಸ್ಥಿತರಿದ್ದರು.

Related posts

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!