August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

ಬೆಳ್ತಂಗಡಿ: ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಶ್ರಮದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಾನಂದ ಸ್ವಾಮಿ ಮಾತನಾಡಿ, ದಾದಿಯರ ಸೇವೆಯ ಮಹತ್ವವನ್ನು ವಿವರಿಸಿದರು.

ದಾದಿಯರು ಸಮಾಜದ ಆರೋಗ್ಯ ವ್ಯವಸ್ಥೆಯ ನಿಜವಾದ ಆಧಾರಸ್ತಂಭಗಳಾಗಿದ್ದು, ಅನಾರೋಗ್ಯ ಪೀಡಿತರ ಹಾಗೂ ಅಗತ್ಯವಿರುವವರ ಸೇವೆಯಲ್ಲಿ ಅಪಾರ ಸಹನೆ, ಪ್ರೀತಿ ಮತ್ತು ತ್ಯಾಗ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. “ದಾದಿಯರ ಸೇವೆ ಮಾನವೀಯತೆಯ ಪ್ರತಿರೂಪವಾಗಿದ್ದು, ಅವರ ಸೇವೆ ದೇವರ ಸೇವೆಗೆ ಸಮಾನ” ಎಂದು ಅವರು ಅಭಿಪ್ರಾಯಪಟ್ಟರು. ಅವರ ನಿರಂತರ ಸೇವೆ ಹಾಗೂ ಕಾಳಜಿಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಸಿಬ್ಬಂದಿ ದಾದಿಯರನ್ನು ಸನ್ಮಾನಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಬಳಿಕ ಕೇಕ್ ಕತ್ತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಶ್ರಮದ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ, ಮಂಗಳೂರು ನರ್ಸಿಂಗ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶ್ರಮದ ನಿವಾಸಿಗಳು ಉಪಸ್ಥಿತರಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!