August 14, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ ಹೀಗೆ ಹತ್ತು ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಳ್ತಂಗಡಿಯ ಸಮಾಜ ಸೇವಕ ದೀಪಕ್ ಜಿ. ಅವರು ಮಂಗಳೂರು ಪ್ರೆಸ್ ಕ್ಲಬ್‌ನ 2025-26ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ನೇತೃತ್ವದ ಸಮಿತಿ ಆಯ್ಕೆ ನಡೆಸಿದ್ದು, ಪ್ರಶಸ್ತಿಯು 10,001 ರೂ.ನಗದು, ಪ್ರಶಸ್ತಿ ಫಲಕ , ಸ್ಮರಣಿಕೆ ಒಳಗೊಂಡಿದೆ. ಮೇ 24ರಂದು ಮಂಗಳೂರಿನ ರೆಡ್ ಕ್ರಾಸ್ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ದೀಪಕ್ ಜಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya
error: Content is protected !!