25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ತಣ್ಣೀರುಪಂಥ: ಗ್ರಾಮ ಪಂಚಾಯತ್ ತಣ್ಣೀರುಪಂಥ ಅರಿವು ಕೇಂದ್ರ ಗ್ರಂಥಾಲಯ ತಣ್ಣೀರುಪಂತ ಇಲ್ಲಿ,”ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ” ಸರಕಾರದ ಆದೇಶದಂತೆ ಮೇ 04 ರಿಂದ ಮೇ11 ವರೆಗೆ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ 12 ರಂದು ನಡೆಯಿತು.

ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮ್ಮಯ್ಯ ಜೆ.ಹೆಚ್ , ಕಾರ್ಯದರ್ಶಿ ಆನಂದ್, ಸಂಪನ್ಮೂಲ ವ್ಯಕ್ತಿಯಾಗಿ ಪ್ರವೀಣ್ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗ ಪಾಲ್ಗೊಂಡರು.

ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನೆ ಹೇಳಿ ಶಿಬಿರದ ಪ್ರಯೋಜನವನ್ನು ಮಕ್ಕಳಿಗೆ ತಿಳಿಸಿ ನಿಮ್ಮ ಮುಂದಿನ ಜೀವನದಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಲು ಈ ಶಿಬಿರವು ನಿಮಗೆ ಮಾರ್ಗದರ್ಶನವಾಗಲಿ ಎಂದು ಶುಭ ಹಾರೈಸಿದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ತಮ್ಮ ತಮ್ಮ ಪ್ರತಿಭೆಯನ್ನು ಹಾಡು ನಾಟಕ ನೃತ್ಯದ ಮೂಲಕ ವ್ಯಕ್ತಪಡಿಸಿದರು.
ಶಿಬಿರದಲ್ಲಿ ಭಾಗವಹಿಸಿದ 25 ಮಕ್ಕಳಿಗೆ ಪ್ರಮಾಣ ಪತ್ರ, ಪೆನ್ನು, ಪುಸ್ತಕ, ರಬ್ಬರ್, ಪೆನ್ಸಿಲ್, ಕಂಪಾಸ್ ಬಾಕ್ಸ್ ನೀಡಿ ಅಭಿನಂದಿಸಲಾಯಿತು . ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ನೇತ್ರಾವತಿ ಹೋಟೆಲ್ ಮಾಲೀಕರು ಹಣ್ಣು ಹಂಪಲು ನೀಡಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya
error: Content is protected !!